ಜೂಜುಕೋರರಿಗೆ ಸಾಥ್ ಪೇದೆಗಳಿಬ್ಬರ ಸಸ್ಪೆಂಡ್

590

Get real time updates directly on you device, subscribe now.

ತುಮಕೂರು: ಗುಬ್ಬಿ ತಾಲ್ಲೂಕಿನಲ್ಲಿ ಇಸ್ಪೀಟ್ ದಂಧೆ ವ್ಯಾಪಕವಾಗಿ ನಡೆಯುತ್ತಿದ್ದು, ದಂಧೆಕೋರರಿಗೆ ಪೊಲೀಸರೆ ಪರೋಕ್ಷವಾಗಿ ಸಹಕಾರ ನೀಡುತ್ತಿದ್ದಾರೆ, ಅಂತಹವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಶಿರಾ ಗ್ರಾಮಾಂತರ ಡಿವೈಎಸ್ಪಿ ಕುಮಾರಪ್ಪ ಅವರು ಎಸ್ ಪಿ ಡಾ.ವಂಶಿಕೃಷ್ಣ ಅವರಿಗೆ ವರದಿ ನೀಡಿದ್ದಾರೆ.
ತುಮಕೂರಿನ ಜಿಲ್ಲಾ ಅಪರಾಧ ಪತ್ತೆ ದಳದ ಇನ್ಸ್ಪೆಕ್ಟರ್ ಶೇಷಾದ್ರಿ, ಗುಬ್ಬಿ ಠಾಣೆಯಲ್ಲಿ ಈ ಹಿಂದೆ ಇದ್ದ ಇನ್ಸ್ಪೆಕ್ಟರ್ ರಾಮಕೃಷ್ಣ, ಈಗಿನ ಗುಬ್ಬಿ ಠಾಣೆಯ ಸಬ್ ಇನ್ಸ್ಪೆಕ್ಟರ್ ಜ್ಞಾನ ಮೂರ್ತಿ ಹಾಗೂ ಇಬ್ಬರು ಪೊಲೀಸ್ ಪೇದೆಗಳಾದ ಸಿದ್ದೇಗೌಡ, ಮಲ್ಲೇಶ್ ಎಂಬುವರ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನ ವಂಶಿಕೃಷ್ಣ ಅವರಿಗೆ ಕುಮಾರಪ್ಪ ವರದಿ ನೀಡಿದ್ದರು, ಈ ಹಿನ್ನೆಲೆಯಲ್ಲಿ ಈಗ ಇಬ್ಬರು ಪೇದೆಗಳನ್ನು ಎಸ್ಪಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಶೇಷಾದ್ರಿ, ರಾಮಕೃಷ್ಣ, ಜ್ಞಾನ ಮೂರ್ತಿ ಅವರ ವಿರುದ್ಧ ಯಾವ ಕ್ರಮವಾಗುತ್ತೆ ಎಂಬುದನ್ನು ಕಾದು ನೊಡಬೇಕಿದೆ.

Get real time updates directly on you device, subscribe now.

Comments are closed.

error: Content is protected !!