ಬೋರೇಗೌಡ ನಿಧನ

586

Get real time updates directly on you device, subscribe now.

ತುರುವೇಕೆರೆ: ತಾಲೂಕಿನ ಕಣತ್ತೂರು ಗ್ರಾಮದ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಹಾಗೂ ತಾಲೂಕು ಟಿಎಪಿಎಂಸಿಎಂಎಸ್ ಮಾಜಿ ಅಧ್ಯಕ್ಷ ಕೆ.ಎಲ್. ಬೋರೇಗೌಡ (85) ತಮ್ಮ ಸ್ವಗ್ರಾಮದಲ್ಲಿ ನಿಧನ ಹೊಂದಿದರು.
ತಾಲೂಕಿನ ಸಹಕಾರಿ ಕ್ಷೇತ್ರದಲ್ಲಿ ತನ್ನದೇ ಆದ ವಿಶೇಷ ಛಾಪನ್ನು ಕೆ.ಎಲ್.ಬೋರೇಗೌಡರು ಮೂಡಿಸಿದ್ದರು. ವಯೋ ಸಹಜವಾಗಿ ಇತ್ತೀಚೆಗೆ ರಾಜಕೀಯದಿಂದ ಅಂತರ ಕಾಯ್ದುಕೊಂಡಿದ್ದ ಅವರು ತಮ್ಮ ಸ್ವಗ್ರಾಮ ಕಣತ್ತೂರಿನಲ್ಲಿ ನಿಧನರಾದರು. ಮೃತರ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ನೆರವೇರಿತು. ಕಣತ್ತೂರು ಬೋರೇಗೌಡರ ನಿಧನಕ್ಕೆ ಶಾಸಕ ಮಸಾಲ ಜಯರಾಂ, ಮಾಜಿ ಶಾಸಕರಾದ ಎಂ.ಟಿ.ಕೃಷ್ಣಪ್ಪ, ಎಸ್.ರುದ್ರಪ್ಪ, ಜಿಪಂ ಮಾಜಿ ಸದಸ್ಯ ಉಗ್ರಯ್ಯ, ತಾಪಂ ಸದಸ್ಯಸ್ವಾಮಿ ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

Get real time updates directly on you device, subscribe now.

Comments are closed.

error: Content is protected !!