ನಟ ಚೇತನ್‌ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

412

Get real time updates directly on you device, subscribe now.

ಕುಣಿಗಲ್‌: ಬ್ರಾಹ್ಮಣರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ನಟ ಚೇತನ್‌ ವಿರುದ್ಧ ಕಠಿಣಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬ್ರಾಹ್ಮಣರ ಸಂಘದ ವತಿಯಿಂದ ತಹಶೀಲ್ದಾರ್‌, ಕುಣಿಗಲ್‌ ಪೊಲೀಸ್‌ ವೃತ್ತ ನಿರೀಕ್ಷಕರಿಗೆ ಸೋಮವಾರ ದೂರು ಸಲ್ಲಿಸಿದರು.
ಸಂಘದ ಕಾರ್ಯದರ್ಶಿ ಜನಾರ್ಧನ್‌ ನೇತೃತ್ವದಲ್ಲಿ ಅಧಿಕಾರಿಗಳನ್ನು ಭೇಟಿ ಮಾಡಿದ ಸಂಘದ ಪದಾಧಿಕಾರಿಗಳು, ನಟ ಚೇತನ್‌ ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣರ ಸಮುದಾಯದ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಸಿ ಅವಮಾನ ಮಾಡಿದ್ದು, ಅವರ ಹೇಳಿಕೆಗಳಿಂದ ಬ್ರಾಹ್ಮಣರ ಸಮುದಾಯದವರಿಗೆ ಅತೀವ ಬೇಸರ ಉಂಟು ಮಾಡಿದೆ, ಆದ್ದರಿಂದ ಸಮುದಾಯವನ್ನು ಅವಹೇಳನಕಾರಿಯಾಗಿ ನಿಂದಿಸಿರುವ ನಟ ಚೇತನ್‌ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಮನವಿ ಮಾಡಿದ್ದಾರೆ. ಪ್ರಮುಖರಾದ ಸುರೇಶ್‌, ನಾಗೇಶ್‌ಶಾಸ್ತ್ರಿ, ಸತ್ಯನಾರಾಯಣ ಒಡೆಯರ್‌, ಅರವಿಂದ್‌, ಮಂಜುನಾಥ ಶರ್ಮ, ರಾಧಾಕೃಷ್ಣ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!