ದುಷ್ಕರ್ಮಿಗಳಿಂದ ಅಟ್ಟಹಾಸ

ಮನೆ ಮುಂದೆ ನಿಲ್ಲಿಸಿದ್ದ ಕಾರುಗಳ ಗಾಜು ಪುಡಿ ಪುಡಿ

356

Get real time updates directly on you device, subscribe now.

ತುಮಕೂರು: ಮನೆಯ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ಕಿಡಿಗೇಡಿಗಳು ಕಲ್ಲು ತೂರಿ ಗಾಜುಗಳನ್ನು ಪುಡಿ ಪುಡಿ ಮಾಡಿರಿವ ಘಟನೆ ನಗರ ಠಾಣೆಯ ವ್ಯಾಪ್ತಿಯ ಶ್ರೀರಾಮನಗರದಲ್ಲಿ ನಡೆದಿದೆ.
ಶ್ರೀರಾಮನಗರದಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ 6 ಕ್ಕೂ ಹೆಚ್ಚು ಕಾರುಗಳ ಗಾಜನ್ನು ಕಿಡಿಗೇಡಿಗಳು ಪುಡಿ ಪುಡಿ ಮಾಡಿ ಕಾರಿನಲ್ಲಿದ್ದ ವಸ್ತುಗಳನ್ನು ಕದ್ದೊಯ್ದಿದ್ದಾರೆ, ಇದರಿಂದ ಮನೆ ಮುಂದೆ ಕಾರುಗಳನ್ನು ನಿಲ್ಲಿಸುವ ಮಾಲೀಕರು ಕಂಗಾಲಾಗಿದ್ದಾರೆ. ಅಲ್ಲದೆ ಮನೆಯ ಮುಂದೆ ನಿಲ್ಲಿಸುವ ಕಾರಿನ ಚಾಲಕರು ಹಾಗೂ ಮಾಲೀಕರು ಈ ಘಟನೆಯಿಂದ ಬೆಚ್ಚಿಬಿದ್ದಿದ್ದಾರೆ.
ವಿಷಯ ತಿಳಿದ ಕೂಡಲೇ ನಗರ ಠಾಣೆಯ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಸ್ಥಳಕ್ಕೆ ಡಿವೈಎಸ್ಪಿ ಶ್ರೀನಿವಾಸ್, ವೃತ್ತ ನಿರೀಕ್ಷಕ ನವೀನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!