ರೌಡಿಸಂ ಮಟ್ಟ ಹಾಕಲು ಕ್ರಮ

260

Get real time updates directly on you device, subscribe now.

ಕೊರಟಗೆರೆ: ಬೆಂಗಳೂರಿನಲ್ಲಿ ಮತ್ತೆ ರೌಡಿಸಂ ಬೆಳೆಯಲು ಅವಕಾಶ ನೀಡುವುದಿಲ್ಲ, ಪುಡಿ ರೌಡಿಗಳ ಅಟ್ಟಹಾಸಕ್ಕೆ ಮಟ್ಟ ಹಾಕಲು ಸರ್ಕಾರ ಕ್ರಮ ಕೈಗೊಂಡಿದೆ, ಬೆಂಗಳೂರಿನ ಜನರ ಶಾಂತಿ ಹಾಳು ಮಾಡಲು ಯಾವುದೇ ಕಾರಣಕ್ಕೂ ಆಸ್ಪದ ನೀಡುವುದಿಲ್ಲ. ಈಗಾಗಲೇ ಗೃಹ ಸಚಿವರ ಜತೆ ಚರ್ಚಿಸಿದ್ದು ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದರು. ಮಾಜಿ ಕಾರ್ಫೊರೇಟರ್‌ ರೇಖಾ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಇಬ್ಬರು-ಮೂವರನ್ನು ಈಗಾಗಲೇ ವಶಕ್ಕೆ ಪಡೆದು ಹೆಚ್ಚಿನ ಮಾಹಿತಿ ಕಲೆ ಹಾಕಿದ್ದಾರೆ, ರೇಖಾ ಅವರ ಕೊಲೆ ಹಿಂದೆ ಯಾರ ಕೈವಾಡವಿದೆ, ಯಾರು ಮಾಡಿದ್ದಾರೆ ಎಂಬ ಬಗ್ಗೆ ಈಗಾಗಲೇ ಪೊಲೀಸರಿಗೆ ಮಾಹಿತಿ ಇದೆ ಎಂದು ಹೇಳಿದರು.

Get real time updates directly on you device, subscribe now.

Comments are closed.

error: Content is protected !!