ಭೀಕರ ಅಪಘಾತ- ಇಬ್ಬರ ದರ್ಮರಣ

5,851

Get real time updates directly on you device, subscribe now.

ತುಮಕೂರು: ಕೋವಿಡ್‌ ವ್ಯಾಕ್ಸಿನ್‌ ಪಡೆಯಲು ತುಮಕೂರಿನಿಂದ ಬೆಂಗಳೂರಿಗೆ ತೆರಳುವಾಗ ಕಾರು ಅಪಘಾತವಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಓರ್ವನಿಗೆ ಗಂಭೀರ ಗಾಯವಾಗಿರುವ ಘಟನೆ ನೆಲಮಂಗಲ ಸಮೀಪದ ಟಿ.ಬೇಗೂರು ಬಳಿಯ ತಾಳೆಕೆರೆ ಹತ್ತಿರ ನಡೆದಿದೆ.
ಉದಯ್‌(23), ಪವನ್‌ (24) ಮೃತರು, ಮಣಿ ಎಂಬಾತನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿಗೆ ವ್ಯಾಕ್ಸಿನ್‌ ಹಾಕಿಸಿಕೊಳ್ಳಲು ತೆರಳುವಾಗ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಭೀಕರ ದುರಂತ ಸಂಭವಿಸಿದೆ. ಮೃತರು ಮತ್ತು ಗಾಯಾಳು ಯುವಕ ತುಮಕೂರಿನ ಚಿಕ್ಕಪೇಟೆಯವರು. ಮೃತ ಉದಯ್‌ ಅಂಗಡಿ ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದ, ಪವನ್‌ ವಾಟರ್‌ ಸರ್ವೀಸ್‌ ಸ್ಟೇಷನ್ ನಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Get real time updates directly on you device, subscribe now.

1 Comment
  1. Uday car driver and pavan milk dairy owner

    It is horapete

Comments are closed.

error: Content is protected !!