ಈಜಲು ತೆರಳಿದ್ದ ಬಾಲಕರಿಬ್ಬರು ನೀರುಪಾಲು

286

Get real time updates directly on you device, subscribe now.

ಶಿರಾ: ಕೆರೆಯಲ್ಲಿದ್ದ ಸ್ವಲ್ಪ ನೀರಿನಲ್ಲಿ ಈಜಾಡಲು ತೆರಳಿದ ಇಬ್ಬರು ಬಾಲಕರು ನೀರು ಪಾಲಾದ ಘಟನೆ ತಾಲ್ಲೂಕಿನ ಕಸಬಾ ಹೋಬಳಿ ಹೊನ್ನಗೊಂಡನಹಳ್ಳಿ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಜರುಗಿದೆ.
ಜಮೀನಿನ ಕಡೆಗೆ ಹೋಗಿದ್ದ ಗ್ರಾಮದ ನವೀನ್‌ (13) ಮತ್ತು ನರೇಂದ್ರ (18) ಮಧ್ಯಾಹ್ನದ ವೇಳೆಗೆ ಕೆರೆಯಲ್ಲಿ ಈಜಲು ತೆರಳಿದ್ದ ವೇಳೆ ಅವಘಡ ಸಂಭವಿಸಿದ್ದು, ಸಂಜೆ ವೇಳೆಗೆ ಗ್ರಾಮಸ್ಥರ ಗಮನಕ್ಕೆ ಬಂದಿದೆ. ನಂತರ ಪೊಲೀಸರಿಗೆ ವಿಷಯ ತಿಳಿಸಿದ್ದು, ನಗರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ವಿಷಯ ತಿಳಿದ ಶಾಸಕ ಡಾ.ಸಿ.ಎಂ.ರಾಜೇಶ್‌ ಗೌಡ, ರಾಜ್ಯ ನಾರು ಅಭಿವೃದ್ಧಿ ಮಂಡಲಿ ಅಧ್ಯಕ್ಷ ಬಿ.ಕೆ.ಮಂಜುನಾಥ್‌, ಮುಖಂಡರಾದ ಮುದಿಮಡು ಮಂಜುನಾಥ್‌, ಮದಲೂರು ನರಸಿಂಹಮುರ್ತಿ ಮೊದಲಾದವರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.

Get real time updates directly on you device, subscribe now.

Comments are closed.

error: Content is protected !!