ಸಿ.ಎಸ್‌.ಪುರ ಪೊಲೀಸರಿಂದ 5 ಜನರ ಬಂಧನ

ಹೆಂಡತಿ ಮೇಲೆ ಗಂಡನಿಂದ ಹಲ್ಲೆ

384

Get real time updates directly on you device, subscribe now.

ಗುಬ್ಬಿ: ಬೆಂಗಳೂರಿನಲ್ಲಿರುವ ಮನೆ ಮಾರಾಟ ಮಾಡಲು ಪತ್ನಿ ಮಮತಾ ಒಪ್ಪತ್ತಿಲ್ಲ ಎಂದು ಗಂಡ ಸೇರಿದಂತೆ ಇತರರು ಸೇರಿಕೊಂಡು ಮಹಿಳೆ ಎನ್ನದೆ ರಾಕ್ಷಸರಂತೆ ಮನ ಬಂದಂತೆ ಹಲ್ಲೆ ನಡೆಸಿದ ಘಟನೆ ಸಿ.ಎಸ್‌.ಪುರ ಪೊಲೀಸ್‌ ಠಾಣೆ ವ್ಯಾಪ್ತಿಯ ಜನ್ನೇನಹಳ್ಳಿಯಲ್ಲಿ ಮಂಗಳವಾರ ಸಂಜೆ ನಡೆದಿದೆ.
ಸಿ.ಎಸ್‌.ಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬರುವ ಜನ್ನೇನಹಳ್ಳಿ ನಿವಾಸಿಗಳಾದ ದಂಪತಿ ಇದ್ದು ಇವರ ನಡುವೆ ಬೆಂಗಳೂರಿನಲ್ಲಿ ಇರುವ ಮನೆ ಹಾಗೂ ಜನ್ನೇನಹಳ್ಳಿಯಲ್ಲಿ ಇರುವ ಜಮೀನನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದರು. ಅದಕ್ಕೆ ಮಹಿಳೆ ಒಪ್ಪದೆ ಇದ್ದಾಗ ಗಂಡ ಸೇರಿದಂತೆ ಇತರರು ಸೇರಿಕೊಂಡು ಮಹಿಳೆಯ ಮೇಲೆ ರಾಕ್ಷಸರಂತೆ ಹಲ್ಲೆ ನಡೆಸಿದ್ದಾರೆ, ಹಲ್ಲೆಯಿಂದ ಮಹಿಳೆಯ ಸ್ಥಿತಿ ಗಂಭೀರವಾಗಿದೆ.
ಕೊಲೆ ಮಾಡಿಯಾದರು ಸರಿಯೇ ನಾವು ಜಮೀನು ಮಾರಾಟ ಮಾಡಬೇಕು ಎಂದು ಒತ್ತಾಯಿಸಿದ್ದಾರೆ, ಆದರೆ ಮಹಿಳೆ ನಮಗೆ ಇಬ್ಬರು ಮಕ್ಕಳು ಇದ್ದಾರೆ, ನಾಳೆ ಅವರಿಗೆ ಏನು ಮಾಡಬೇಕು, ನಮಗೆ ನಮ್ಮ ಮಕ್ಕಳ ಭವಿಷ್ಯ ಮುಖ್ಯವಾಗಿದೆ, ಆದ್ದರಿಂದ ಯಾವುದೇ ಕಾರಣಕ್ಕೂ ಮಾರಾಟ ಮಾಡಲು ನಾನು ಒಪ್ಪುವುದಿಲ್ಲ ಎಂದು ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಗಂಡನಾದ ವೈರಮುಡಿ ಹಾಗೂ ಇತರರು ಸೇರಿಕೊಂಡು ಹಲ್ಲೆ ನಡೆಸಿದ್ದಾರೆ.
ಇದರ ಸಂಬಂಧ ಸಿ.ಎಸ್‌.ಪುರ ಪೊಲೀಸ್‌ ಠಾಣೆ ಸಬ್ ಇನ್ಸ್ಪೆಕ್ಟರ್‌ ಸೋಮಶೇಖರ್‌ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಜನರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಸ್ಥಳಕ್ಕೆ ಗುಬ್ಬಿ ವೃತ್ತ ನಿರೀಕ್ಷಕ ನದಾಫ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!