ಆಸ್ಕರ್‌ ನಿಧನಕ್ಕೆ ಜಿ ಎಸ್ ಬಿ ಸಂತಾಪ

133

Get real time updates directly on you device, subscribe now.

ತುಮಕೂರು: ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್‌ ಮುಖಂಡ ಆಸ್ಕರ್‌ ಪರ್ನಾಂಡೀಸ್‌ ಅವರ ನಿಧನಕ್ಕೆ ತುಮಕೂರು ಲೋಕಸಭಾ ಸದಸ್ಯ ಜಿ.ಎಸ್‌.ಬಸವರಾಜು ಸಂತಾಪ ಸೂಚಿಸಿದ್ದಾರೆ.
ಏಳು ಬಾರಿ ಸಂಸತ್‌ ಸದಸ್ಯರಾಗಿ, ಪಕ್ಷ ನಿಷ್ಠ ರಾಜಕಾರಣಿಯಾಗಿ ಕಾರ್ಯ ನಿರ್ವಹಿಸಿದ್ದ ಆಸ್ಕರ್‌ ಪರ್ನಾಂಡೀಸ್‌, ರಾಜ್ಯ ಮತ್ತು ರಾಷ್ಟ್ರದ ಏಳಿಗೆಗಾಗಿ ಶ್ರಮಿಸಿದ್ದರು. ಅವರ ನಿಧನದಿಂದ ಹಿರಿಯ ಪ್ರಾಮಾಣಿಕ ರಾಜಕಾರಣಿಯೊಬ್ಬರನ್ನು ಕರ್ನಾಟಕ ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ, ಅವರ ಮರಣದ ದುಖಃ ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಸಂಸದ ಜಿ.ಎಸ್‌.ಬಸವರಾಜು ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!