ಬೆಂಕಿ ಹಚ್ಚಿ ಪತಿಯನ್ನು ಹತ್ಯೆಗೈದ ಪತ್ನಿ

ಪತ್ನಿಯ ಅಕ್ರಮ ಸಂಬಂಧವೇ ಹತ್ಯೆಗೆ ಕಾರಣ...

665

Get real time updates directly on you device, subscribe now.

ತುಮಕೂರು: ಮಹಿಳೆಯೊಬ್ಬರು ಪತಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿ, ಕೊಂದು ಶವವನ್ನು ಚರಂಡಿಗೆ ಎಸೆದ ಘಟನೆ ತುಮಕೂರು ನಗರದ ಬಡ್ಡಿಹಳ್ಳಿಯಲ್ಲಿ ನಡೆದಿದೆ. ನಾರಾಯಣ್ (52) ಮೃತ ದುರ್ದೈವಿ ಎಂದು ತಿಳಿದು ಬಂದಿದ್ದು, ನಾರಾಯಣ್ ಪತ್ನಿ ಅನ್ನಪೂರ್ಣ ಕೊಲೆ ಮಾಡಿದ ಆರೋಪಿ ಎನ್ನಲಾಗಿದೆ.
ಅನ್ನಪೂರ್ಣ ಅವರಿಗೆ ಅಕ್ರಮ ಸಂಬಂಧ ಇತ್ತು. ಇದೇ ವಿಚಾರಕ್ಕೆ ನಾರಾಯಣ್ ಮತ್ತು ಅನ್ನಪೂರ್ಣ ಅವರ ನಡುವೆ ಪ್ರತಿನಿತ್ಯ ಜಗಳ ಆಗುತ್ತಲೇ ಇತ್ತು. ಅನ್ನಪೂರ್ಣ ಇದೇ ವಿಚಾರಕ್ಕೆ ಗಂಡನನ್ನು ಹತ್ಯೆ ಮಾಡಿದ್ದಾಳೆ ಎಂಬ ಆರೋಪ ಕೇಳಿ ಬಂದಿದೆ. ಬೆಂಕಿ ಹತ್ತಿದ ಮೇಲೆ ಪತಿ ನಾರಾಯಣ್ ಜೀವ ಉಳಿಸಿಕೊಳ್ಳಲು ಮನೆಯಿಂದ ಹೊರ ಓಡಿ ಬಂದರೂ ಪತ್ನಿ ಅನ್ನಪೂರ್ಣ ಅಟ್ಟಿಸಿಕೊಂಡು ಬಂದು ಚರಂಡಿಗೆ ತಳ್ಳಿ, ತಲೆಮೇಲೆ ಕಲ್ಲು ಎತ್ತಿ ಹಾಕಿ ಕ್ರೂರವಾಗಿ ಕೊಲೆಗೈದಿದ್ದಾಳೆ ಎನ್ನಲಾಗಿದೆ.
ಮೃತ ನಾರಾಯಣ್ ನೆಲಮಂಗಲ ಬಳಿಯ ಟೋಲ್ ನಲ್ಲಿ ಕೆಲಸ ಮಾಡಿಕೊಂಡಿದ್ದರು, ತುಮಕೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅನ್ನಪೂರ್ಣಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅನ್ನಪೂರ್ಣ ತಪ್ಪೊಪ್ಪಿಕೊಂಡಿದ್ದು, ಅನೈತಿಕ ಸಂಬಂಧದಲ್ಲಿದ್ದ ರಾಮಕೃಷ್ಣ ಎನ್ನುವವನನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Get real time updates directly on you device, subscribe now.

Comments are closed.

error: Content is protected !!