ಕೆ ಎನ್ ಆರ್‌ ಅಧ್ಯಕ್ಷತೆಯಲ್ಲಿ ಡಿಸಿಸಿ ಬ್ಯಾಂಕ್‌ ಸರ್ವ ಸದಸ್ಯರ ಸಭೆ

479

Get real time updates directly on you device, subscribe now.

ತುಮಕೂರು: ತುಮಕೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ 67ನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಕೆ.ಎನ್‌.ರಾಜಣ್ಣ ಅವರ ಅಧ್ಯಕ್ಷತೆಯಲ್ಲಿ ವೆಬಿನಾರ್‌ ಮೂಲಕ ನಡೆಯಿತು.
ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಮಾಜಿ ಶಾಸಕ ಹಾಗೂ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಕೆ.ಎನ್‌.ರಾಜಣ್ಣ, ಬಹುತೇಕ ಸಹಕಾರಿಗಳು ಸಭೆಯಲ್ಲಿ ಸಹಕಾರಿ ಸಂಸ್ಥೆಗಳ ಬೆಳವಣಿಗೆಗೆ ಅಗತ್ಯವಿರುವ ಸಲಹೆಗಳನ್ನು ನೀಡಿದ್ದಾರೆ. ಇದೊಂದು ಉತ್ತಮ ಬೆಳವಣಿಗೆಯಾಗಿದೆ. ಹಾಗೆಯೇ ನಾನು ಕೂಡ ಸಭೆಯಲ್ಲಿ ಪಾಲ್ಗೊಂಡಿದ್ದ ಸಹಕಾರಿ ಸಂಸ್ಥೆಗಳ ಧುರೀಣರಿಗೆ ಸ್ಥಳೀಯವಾಗಿ ಗ್ರಾಹಕರ ಆರ್ಥಿಕ ಅನುಕೂಲಕ್ಕೆ ತಕ್ಕಂತೆ ಹೇಗೆ ಕಾರ್ಯ ನಿರ್ವಹಿಸುವ ಮೂಲಕ ಸಂಪನ್ಮೂಲಕ ಕ್ರೂಢೀಕರಣ ಮಾಡಬಹುದು ಎಂಬ ಸಲಹೆ ಸೂಚನೆಗಳನ್ನು ನೀಡಿದ್ದೇನೆ. ಒಟ್ಟಾರೆಯಾಗಿ ಸಹಕಾರಿ ಸಂಸ್ಥೆಗಳು ಹೆಚ್ಚು ಹೆಚ್ಚಾಗಿ ಜನರನ್ನು ತಲುಪಲು ಅಗತ್ಯವಿರುವ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಲಾಗಿದೆ ಎಂದರು.
ಕೊರೊನ ಹಿನ್ನೆಲೆಯಲ್ಲಿ ವೆಬಿನಾರ್‌ ಮೂಲಕ ಸಭೆ ಆಯೋಜಿಸಿದ್ದು, ಸಭೆಯಲ್ಲಿ ಎಲ್ಲಾ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ಸಭೆ ಯಶಸ್ವಿಗೊಳಿಸಿದ್ದಾರೆ. ಅದಕ್ಕಾಗಿ ಎಲ್ಲಾ ಸಹಕಾರಿ ಧುರೀಣರಿಗೂ ಅಭಿನಂದನೆ ಸಲ್ಲಿಸುವುದಾಗಿ ಕೆ.ಎನ್‌.ರಾಜಣ್ಣ ತಿಳಿಸಿದರು.
ಈ ವೇಳೆ ಡಿಸಿಸಿ ಬ್ಯಾಂಕಿನ ನಿರ್ದೇಶಕ ಲಕ್ಷ್ಮಿನಾರಾಯಣ ಜೊತೆಗಿದ್ದರು.

Get real time updates directly on you device, subscribe now.

Comments are closed.

error: Content is protected !!