ಶಾಸಕ ಎಸ್‌.ಆರ್‌.ಶ್ರೀನಿವಾಸ್‌ ಜೆಡಿಎಸ್‌ ಬಿಡಲ್ಲ

252

Get real time updates directly on you device, subscribe now.

ಗುಬ್ಬಿ: ಗುಬ್ಬಿ ಶಾಸಕರು ಯಾವುದೇ ಕಾರಣಕ್ಕೂ ಜೆಡಿಎಸ್‌ ಪಕ್ಷ ಬಿಡುವುದಿಲ್ಲ ಎಂದು ತಾಲೂಕು ಜೆಡಿಎಸ್‌ ಪಕ್ಷದ ಅಧ್ಯಕ್ಷ ಗುರುರೇಣುಕರಾದ್ಯ ಸ್ಪಷ್ಟ ಪಡಿಸಿದರು.
ಪಟ್ಟಣದ ಜೆಡಿಎಸ್‌ ಪಕ್ಷದಿಂದ ಸದಸ್ಯ ಅಭಿಯಾನ ಕಾರ್ಯಕ್ರಮದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರನ್ನು ಗುಬ್ಬಿ ಕ್ಷೇತ್ರದಿಂದ ಭೇಟಿ ಮಾಡಿದ ಮುಖಂಡರು ಜೆಡಿಎಸ್‌ ಪಕ್ಷವನ್ನು ಇನ್ನಷ್ಟು ಬಲಿಷ್ಠ ಮಾಡಲು ಹಾಗೂ ಸಂಘಟನೆ ಮತ್ತು ನಮ್ಮ ಪಕ್ಷಕ್ಕೆ ಸೇರಿಕೊಳ್ಳಲು ಭೇಟಿ ಮಾಡಿರುವುದು ಬಿಟ್ಟರೆ ಶ್ರೀನಿವಾಸ್‌ ವಿರುದ್ಧ ಜೆಡಿಎಸ್‌ ಪಕ್ಷಕ್ಕೆ ಬರುತ್ತಾರೆ ಎಂಬುದು ಕೇವಲ ಸೃಷ್ಟಿ ಅಷ್ಟೇ. ಇದರಲ್ಲಿ ಯಾವುದೇ ಸತ್ಯ ಇಲ್ಲ, ಶ್ರೀನಿವಾಸ್‌ ಅವರು ನಮ್ಮ ಎಲ್ಲಾ ನಾಯಕರ ಜೊತೆ ಚೆನ್ನಾಗಿಯೇ ಇದ್ದಾರೆ, ಮುಂದಿನ ಟಿಕೆಟ್‌ ಕೂಡ ಪಡೆಯುತ್ತಾರೆ, ಇದರಲ್ಲಿ ಯಾವುದೇ ಅನುಮಾನವಿಲ್ಲ, ಅವರ ಹಿಂದೆ ದೊಡ್ಡ ಮಟ್ಟದ ಕಾರ್ಯ ಕಾರ್ಯಕರ್ತರ ಪಡೆಯೇ ಇದೆ, ನಮ್ಮನ್ನೆಲ್ಲ ಕೇಳದೆ ಯಾವುದೇ ತೀರ್ಮಾನ ತೆಗೆದುಕೊಳ್ಳುವುದಿಲ್ಲ ಎಂದು ತಿಳಿಸಿದರು.
ತುಮಕೂರು ಎಸ್‌ಟಿ ಘಟಕದ ಅಧ್ಯಕ್ಷ ಕೃಷ್ಣಮೂರ್ತಿ ಮಾತನಾಡಿ, ಜೆಡಿಎಸ್‌ ಬಿಡುತ್ತೇನೆ ಎಂದು ಎಲ್ಲಿಯೂ ಸಹ ಶ್ರೀನಿವಾಸ್‌ ಹೇಳಿಲ್ಲ, ಇದರ ಬಗ್ಗೆ ಕಾರ್ಯಕರ್ತರು ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ, ಅವರು ಮುಂದಿನ ಬಾರಿಯೂ ನಮ್ಮ ಪಕ್ಷದಿಂದಲೇ ಅಭ್ಯರ್ಥಿಯಾಗಿ ಗೆಲುವು ಪಡೆಯುತ್ತಾರೆ, ಯಾವುದೇ ಊಹಾಪೋಹಗಳಿಗೆ ಕಿವಿಕೊಡಬಾರದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಕೆ.ಸಿ.ಕೃಷ್ಣ ಮೂರ್ತಿ, ರಂಗಸ್ವಾಮಿ, ವೆಂಕಟೇಶ್‌, ಬೆಲವತ್ತ ಶಿವಕುಮಾರ್‌ ಇನ್ನಿತರರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!