ಹಾವು ಕಚ್ಚಿ ರೈತ ಸಾವು

284

Get real time updates directly on you device, subscribe now.

ಕೊರಟಗೆರೆ: ತನ್ನ ಜಮೀನನಲ್ಲಿ ನೀರಿ ಹಾಯಿಸುವಾಗ ಹಾವು ಕಚ್ಚಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಕೋಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿ ಮೋರಗಾನಹಳ್ಳಿ ಗ್ರಾಮದ ಗಂಗಯ್ಯ ಮಗ ಚಿಕ್ಕನರಸಯ್ಯ (39) ವ್ಯಕ್ತಿ ಮೃತಪಟ್ಟ ದುರ್ದೈವಿ. ಭಾನುವಾರ ರಾತ್ರಿ ತನ್ನ ಜಮೀನನ ಮುಸಿಕಿನ ಜೋಳದ ಗದ್ದೆಗೆ ನೀರು ಹಾಯಿಸಲು ಹೋಗಿದ್ದ ಚಿಕ್ಕನರಸಯ್ಯನಿಗೆ ಕತ್ತಲ್ಲಲಿ ಹಾವು ಕಡಿದಿದೆ. ತಕ್ಷಣ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಾಕಾರಿಯಾಗದೇ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಕೋಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪಿಎಸ್‌ಐ ಮಹಾಲಕ್ಷ್ಮಮ್ಮ ಭೇಟಿ ನೀಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!