ಸಿದ್ದಲಿಂಗೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದ ರೇಣುಕಾಚಾರ್ಯ

189

Get real time updates directly on you device, subscribe now.

ಕುಣಿಗಲ್‌: ತಾಲೂಕಿನ ಪ್ರಸಿದ್ದ ಯಾತ್ರಾ ಕ್ಷೇತ್ರವಾದ ಎಡೆಯೂರು ಸಿದ್ದಲಿಂಗೇಶ್ವರ ಸ್ವಾಮಿ ದೇವಾಲಯಕ್ಕೆ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಬುಧವಾರ ಆಗಮಿಸಿ ಪೂಜೆ ನೆರವೇರಿಸಿದರು.
ಶ್ರೀಕ್ಷೇತ್ರಕ್ಕೆ ಆಗಮಿಸಿದ ರೇಣುಕಾಚಾರ್ಯ ಅವರನ್ನು ದೇವಾಲಯ ಆಡಳಿತ ಮಂಡಲಿ, ತಾಲೂಕು ಬಿಜೆಪಿ ಅಧ್ಯಕ್ಷ ಬಲರಾಮ್‌ ಬರ ಮಾಡಿಕೊಂಡರು. ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ ನೆರವೇರಿಸಿದರು, ಈಹಿಂದೆ ಯಡಿಯೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮಾಜಿ ಸಿಎಂ ಯಡಿಯೂರಪ್ಪನವರು ಕೋಟ್ಯಾಂತರ ರೂ. ಅನುದಾನ ನೀಡಿದ್ದು ದೇವಾಲಯ ಪುನರ್‌ ನಿರ್ಮಾಣ ಕಾಮಗಾರಿ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯ ನೆನೆಗುದಿಗೆ ಬೀಳುವಂತಾಗಿರುವ ಬಗ್ಗೆ ತಾಲೂಕು ಬಿಜೆಪಿ ಅಧ್ಯಕ್ಷ ಬಲರಾಮ್‌, ರೇಣುಕಾಚಾರ್ಯರ ಗಮನಕ್ಕೆ ತಂದು ಹಲವು ತಾಂತ್ರಿಕ ಕಾರಣಗಳಿಂದ ನೆನಗುದಿಗೆ ಬಿದ್ದಿರುವ ಕಾಮಗಾರಿಗಳ ಚುರುಕುಗೊಳಿಸಲು ಮನವಿ ಮಾಡಿದರು. ಅಧ್ಯಕ್ಷರ ಮನವಿಗೆ ಸ್ಪಂದಿಸಿ, ಈ ಬಗ್ಗೆ ಸಂಬಂಧ ಪಟ್ಟವರೊಂದಿಗೆ ಚರ್ಚಿಸಿ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ತಹಶೀಲ್ದಾರ್‌ ಮಹಾಬಲೇಶ್ವರ್‌, ಧಾರ್ಮಿಕ ಪರಿಷತ್‌ ಸದಸ್ಯ ಸಿದ್ದಲಿಂಗಪ್ರಭು, ಮುಖಂಡರಾದ ರವಿಚಂದ್ರ, ಕೆ.ಎಸ್‌.ಕೃಷ್ಣ, ವೆಂಕಟೇಶ, ಉಮೇಶ್‌ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!