ಹೆಚ್‌ಡಿಕೆ ತಾಲಿಬಾನಿಗಳಂತೆ ವರ್ತಿಸ್ತಿದ್ದಾರೆ: ರೇಣುಕಾಚಾರ್ಯ

406

Get real time updates directly on you device, subscribe now.

ತುಮಕೂರು: ಕಾಂಗ್ರೆಸ್‌ನ ಕೆಲ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಾಲಿಬಾನಿಗಳಂತೆ ವರ್ತಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಟೀಕಿಸಿದರು.
ತಾಲಿಬಾನಿಗಳಂತೆ ವರ್ತಿಸುತ್ತಿರುವ ಕಾಂಗ್ರೆಸ್‌ನ ಕೆಲ ನಾಯಕರು ಹಾಗೂ ಕುಮಾರಸ್ವಾಮಿ ಅವರಿಗೆ ದೇಶ ಹಾಗೂ ರಾಜ್ಯದ ಜನತೆ ತಕ್ಕಪಾಠ ಕಲಿಸಲಿದ್ದಾರೆ ಎಂದರು.
ನಗರದ ಸಿದ್ದಗಂಗಾ ಮಠಕ್ಕೆ ರಾತ್ರಿ ಭೇಟಿ ನೀಡಿ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ದೇಶದ ಸಂಸ್ಕೃತಿ ರಕ್ಷಣೆ ಮತ್ತು ಉಳಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಭಾರತೀಯ ಜನತಾ ಪಕ್ಷ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ಇನ್ನು ಡಿ.ಕೆ.ಶಿವಕುಮಾರ್‌ ಅವರ ತುಘಲಕ್‌ ದರ್ಬಾರ್‌ ಬಗ್ಗೆ ನನಗೂ ತಿಳಿದಿದೆ, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ಸಂಪುಟದಲ್ಲಿ ಕ್ಯಾಬಿನೆಟ್‌ ಸಚಿವರಾಗಿದ್ದಾಗ ಡಿ.ಕೆ.ಶಿವಕುಮಾರ್‌ ಅವರು ದೌರ್ಜನ್ಯ ಮಾಡಿಲ್ಲವಾ ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಬಂದಾಗಿನಿಂದ ರಾಜ್ಯದ ಜನತೆ ನೆಮ್ಮದಿಯಿಂದ ಇದ್ದಾರೆ. ಕುಮಾರಸ್ವಾಮಿ ಹಾಗೂ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಗಲಭೆಗಳು ಆಗಿದ್ದವು. ಇದುವರೆಗೂ ನಮ್ಮ ಅವಧಿಯಲ್ಲಿ ಯಾವುದೇ ಗಲಭೆ ಆಗಿಲ್ಲ, ಅವರ ಆಡಳಿತ ಅವಧಿಯಲ್ಲಿ ಎಷ್ಟು ಕೋಮು ಗಲಭೆಗಳಾಗಿವೆ ಎಂಬುದು ನೆನಪಿದೆಯಾ ಎಂದು ಪ್ರಶ್ನಿಸಿದರು.
ಬಿಜೆಪಿ ಹಾಗೂ ಆರೆಸ್ಸೆಸ್‌ ದೀಪದ ಸಂಕೇತ, ದೀಪ ಎಷ್ಟು ಪ್ರಜ್ವಲಿಸುತ್ತೋ ಹಾಗೆಯೇ ದೇಶದ ಸಂಸ್ಕೃತಿಯನ್ನು ಆರೆಸ್ಸೆಸ್‌ ಉಳಿಸಿಕೊಂಡು ಬರುತ್ತಿದೆ. ಆರೆಸ್ಸೆಸ್‌ ಬೆಂಕಿ ಹಚ್ಚುವ ಕೆಲಸ ಮಾಡಿಲ್ಲ ಎಂದ ಅವರು, ವೋಟಿನ ರಾಜಕಾರಣಕ್ಕಾಗಿ ಕುಮಾರಸ್ವಾಮಿ ಅವರು ಬೆಂಕಿ ಹಚ್ಚುವ ಕೆಲಸ ಮಾಡುತ್ತಾರೆ, ಬಿಜೆಪಿ ಹಾಗೂ ಆರೆಸ್ಸೆಸ್‌ ಯಾವತ್ತೂ ದೇಶ ಹಾಗೂ ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡಿಲ್ಲ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಟಿ.ಆರ್‌. ಸದಾಶಿವಯ್ಯ ಮತ್ತಿತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!