ದೇವರಾಯನದುರ್ಗ ಬೆಟ್ಟದಲ್ಲಿ ಬಂಡೆ ಕುಸಿತ

314

Get real time updates directly on you device, subscribe now.

ತುಮಕೂರು: ತಾಲ್ಲೂಕಿನ ದೇವರಾಯನದುರ್ಗ ಬೆಟ್ಟದ ರಸ್ತೆಯಲ್ಲಿ ಕಳೆದ ರಾತ್ರಿ ಅಬ್ಬರಿಸಿದ ಮಳೆಯಿಂದಾಗಿ ರಸ್ತೆಗೆ ಬಂಡೆ ಉರುಳಿ ಬಿದ್ದ ಪರಿಣಾಮ ರಸ್ತೆ ಸಂಚಾರ ಬಂದ್‌ ಆಗಿ ಭಕ್ತರಿಗೆ ತೀವ್ರ ತೊಂದರೆಯಾಯಿತು.
ಜಿಲ್ಲೆಯಲ್ಲಿ ಉತ್ತಮವಾಗಿ ಮಳೆಯಾಗುತ್ತಿದ್ದು, ಕಳೆದ ರಾತ್ರಿ ಬೆಟ್ಟದ ಮೇಲಿನ ಚೆಕ್‌ ಪೋಸ್‌್ಟ ಬಳಿ ಬಂಡೆ ಕುಸಿದು ರಸ್ತೆಗೆ ಬಿದ್ದಿದೆ, ಇದರಿಂದ ಯೋಗ ನರಸಿಂಹ ಸ್ವಾಮಿ ದೇವಾಲಯ ರಸ್ತೆ ಬಂದ್‌ ಆಗಿತ್ತು.
ವಿಷಯ ತಿಳಿದ ತುಮಕೂರು ತಹಶೀಲ್ದಾರ್‌ ಮೋಹನ್‌ಕುಮಾರ್‌ ಅವರು ಇಂಜಿನಿಯರ್‌ಗಳೊಂದಿಗೆ ಸ್ಥಳಕ್ಕೆ ತೆರಳಿ ಜೆಸಿಬಿ ಯಂತ್ರಗಳ ಮೂಲಕ ಬಂಡೆ ತೆರವುಗೊಳಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಜಿಲ್ಲೆಯಲ್ಲಿ ಮಳೆ ಸುರಿಯುತ್ತಿರುವುರಿಂದ ಬೆಟ್ಟಲ್ಲಿ ಕಲ್ಲು, ಮಣ್ಣು ಕುಸಿಯುಬಹುದು, ಬೆಟ್ಟಕ್ಕೆ ಹಾಘೂ ದೇವಸ್ಥಾನಕ್ಕೆ ಬರುವ ಭಕ್ತರು ಎಚ್ಚರದಿಂದ ಇರುವಂತೆ ತಹಶೀಲ್ದಾರ್‌ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!