ಬಿಜೆಪಿ ನಾಯಕರಿಂದ ಅತೃಪ್ತಿ ಸ್ಪೋಟ!

376

Get real time updates directly on you device, subscribe now.


ತುಮಕೂರು: ಜಿಲ್ಲಾ ಬಿಜೆಪಿ ಪಡೆಸಾಲೆಯಲ್ಲಿ ಅತೃಪ್ತಿ ಆಕ್ರೋಶ ದಿನೇ ದಿನೇ ಹೆಚ್ಚಾಗುತ್ತಿದೆ. ಈಚೆಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಬಿ.ಸುರೇಶ್ ಗೌಡ ರಾಜೀನಾಮೆ ನೀಡಿದ ಬೆನ್ನಹಿಂದೆಯೇ ತುರುವೇಕೆರೆ ಶಾಸಕ ಮಸಾಲ ಜಯರಾಂ ಅವರು ವರಿಷ್ಠರ ಬಗ್ಗೆ ಕಿಡಿ ಕಾರಿದ್ದಾರೆ.
ನಿಗಮ, ಮಂಡಳಿಯ ಅಧ್ಯಕ್ಷ ಸ್ಥಾನ ಕೊಡದಿದ್ದರೆ ಶಾಸಕ ಸ್ಥಾನಕ್ಕೆ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ.
ಪಕ್ಷ ನಿಷ್ಟಾವಂತ ಸಂಘಟಕರಿಗೆ ದ್ರೋಹ ಬಗೆಯುವ ಕೆಲಸ ಮಾಡುತ್ತಿದೆ. ಸಚಿವ ಸ್ಥಾನದ ಆಕಾಂಕ್ಷಿ ನಾನಲ್ಲ. ಜವಾಬ್ದಾರಿಯುತ ನಿಗಮ ಮಂಡಳಿ ಸ್ಥಾನ ಸಾಕು ಎಂದು ಬೇಡಿಕೆ ಇಟ್ಟಿದ್ದೆ. ಆದರೆ, ಇದುವರೆಗೂ ಈ ಬಗ್ಗೆ ಪ್ರತಿಕ್ರಿಯಿಸಿಲ್ಲ. ಅತ್ಯಂತ ನಿರ್ಲಕ್ಷ್ಯತನದಿಂದ ನೋಡಲಾಗುತ್ತಿದೆ. ಇದು ಹೀಗೆ ಮುಂದುವರೆದರೆ ರಾಜೀನಾಮೆ ನೀಡುವ ನಿರ್ಧಾರ ಶೀಘ್ರದಲ್ಲೆ ಕೈಗೊಳ್ಳಲಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!