ಹೃದಯಾಘಾತ: ಗಂಗೇಶ್ ನಿಧನ

3,235

Get real time updates directly on you device, subscribe now.

ತುಮಕೂರು: ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸಿದ್ದ ಗಂಗೇಶ್ (49) ಅವರು ಹೃದಯಾಘಾತದಿಂದ ಇಂದು ಬೆಳಗಿನ ಜಾವ ತಮ್ಮ ಸ್ವಗೃಹದಲ್ಲಿ ನಿಧನರಾದರು.
ವಿದ್ಯಾನಗರದ ವಾಟರ್ ಟ್ಯಾಂಕ್ ಬಳಿ ಇರುವ ನಿವಾಸದಲ್ಲಿ ಮುಂಜಾನೆ 4.30 ವೇಳೆಗೆ ಗಂಗೇಶ್ ಅವರಿಗೆ ಎದೆನೋವು ಕಾಣಿಸಿಕೊಂಡು ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ.
ಶ್ರೀಯುತರು ಪತ್ನಿ, ಇಬ್ಬರು ಗಂಡು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಗಂಗೇಶ್ ಅವರು ಜಿಲ್ಲೆಯ ಚಿಕ್ಕನಾಯಕನಹಳ್ಳಿ, ತಿಪಟೂರು ಹಾಗೂ ಸಿರಾ ತಾಲ್ಲೂಕಿನ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸಿದ್ದರು. ನಂತರ ತಮ್ಮ ಮಾತೃ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಮೃತರ ಪಾರ್ಥೀವ ಶರೀರವನ್ನು ಅವರ ನಿವಾಸದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ಭಾನುವಾರ ಮಧ್ಯಾಹ್ನ ನಗರದ ಅಕ್ಕತಂಗಿಯರ ಕಟ್ಟೆ ಬಳಿ ಇರುವ ಅವರ ಜಮೀನಿನಲ್ಲಿ ಗಂಗೇಶ್ ಅವರ ಅಂತ್ಯಕ್ರಿಯೆ ನೆರವೇರಿತು.

Get real time updates directly on you device, subscribe now.

Comments are closed.

error: Content is protected !!