ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಸದುಪಯೋಗಲಿ: ವೈ.ಎಸ್‌. ಪಾಟೀಲ

ಫಲಾನುಭವಿಗಳಿಗೆ ಉಚಿತ ಆರೋಗ್ಯ ಸೇವೆ

154

Get real time updates directly on you device, subscribe now.

ತುಮಕೂರು: ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಯೋಜನೆಯನ್ನು ಪ್ರತಿಯೊಬ್ಬರೂ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್‌ ಪಾಟೀಲ ತಿಳಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯುಷ್ಮಾನ್‌ ಭಾರತ್‌- ಆರೋಗ್ಯ ಕರ್ನಾಟಕ ಯೋಜನೆ ಕುರಿತು ಅರಿವು ಮೂಡಿಸುವ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆ ಆವರಣದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಹಮ್ಮಿಕೊಂಡಿದ್ದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಈಗಾಗಲೇ ಜಿಲ್ಲೆಯಲ್ಲಿ 5 ಲಕ್ಷಕ್ಕಿಂತ ಹೆಚ್ಚು ಮಂದಿ ಈ ಯೋಜನೆಯ ಉಪಯೋಗ ಪಡೆದುಕೊಳ್ಳುತ್ತಿದ್ದು, ಹೆಚ್ಚಿನ ಮಂದಿಗೆ ಯೋಜನೆ ತಲುಪಿಸುವ ಗುರಿ ಹೊಂದಲಾಗಿದೆ. ಅಲ್ಲದೆ, ಬಿಪಿಎಲ್‌ ಕಾರ್ಡ್‌ ಹೊಂದಿರುವ ಫಲಾನುಭವಿಗಳಿಗೂ ಉಚಿತ ಆರೋಗ್ಯ ಸೇವೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಗೌರ್ನಮೆಂಟ್‌ ಸ್ಕೂಲ್‌ ಆಫ್‌ ನರ್ಸಿಂಗ್‌ ಹಾಗೂ ಗೌರ್ನಮೆಂಟ್‌ ನರ್ಸಿಂಗ್‌ ಕಾಲೇಜಿನ ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡು ಎಲ್ಲರಿಗೂ ಆರೋಗ್ಯ, ಎಲ್ಲೆಡೆಯೂ ಆರೋಗ್ಯ, ಬಿಪಿಎಲ್‌ ಕಾರ್ಡ್‌ ಇರುವವರಿಗೆ ಒಂದು ವರ್ಷಕ್ಕೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆ ಸೇರಿದಂತೆ ಹಲವು ಘೋಷವಾಕ್ಯಗಳ ಮೂಲಕ ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್‌ ಸಿಇಒ ಡಾ.ಕೆ.ವಿದ್ಯಾಕುಮಾರಿ, ಡಿಹೆಚ್‌ಓ ನಾಗೇಂದ್ರಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವೀರಭದ್ರಯ್ಯ, ಡಾ.ವೀಣಾ, ಆರ್.ಸಿ.ಹೆಚ್‌ ಅಧಿಕಾರಿ ಡಾ.ಕೇಶವ್ ರಾಜ್‌, ಡಿ.ಎಸ್.ಓ ಮೋಹನ್ ದಾಸ್‌, ಡಿ.ಎಲ್.ಒ ಡಾ.ಚೇತನ್‌ ಮತ್ತಿತರು ಇದ್ದರು.

Get real time updates directly on you device, subscribe now.

Comments are closed.

error: Content is protected !!