ಮಧುಗಿರಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಜಿಲ್ಲೆಯಿಂದ ಎಡಗೈ ಸಮುದಾಯದ ಮುಖಂಡ ಎಚ್.ಕೆಂಚಮಾರಯ್ಯ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಬೇಕೆಂದು ಮಾದಿಗ ಸಮುದಾಯದ ಮುಖಂಡ ಗಂಗಾಧರಪ್ಪ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಎಡಗೈ ಸಮುದಾಯದವರು 4.30 ಲಕ್ಷಕ್ಕೂ ಹೆಚ್ಚು ಮತದಾರರಿದ್ದು, ಸ್ಥಳೀಯ ಸಂಸ್ಥೆಗಳಿಂದ 900 ಕ್ಕೂ ಹೆಚ್ಚು ಗ್ರಾಮ ಪಂಚಾಯತಿ ಸದಸ್ಯರು ಆಯ್ಕೆಯಾಗಿದ್ದು, ಸಮುದಾಯದ ಹಿರಿಯ ಮುಖಂಡ ಹಾಗೂ ಎರಡು ಬಾರಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿರುವ ಎಚ್.ಕೆಂಚಮಾರಯ್ಯ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಬೇಕೆಂದು ಆಗ್ರಹಿಸಿದರು. ಜಿಲ್ಲೆಯಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳು ಮೀಸಲು ಕ್ಷೇತ್ರಗಳ ಆಗಿದ್ದರೂ ಕೂಡ ಮಾದಿಗ ಸಮುದಾಯಕ್ಕೆ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ತಿಳಿಸಿದರು.
ವಿಧಾನಪರಿಷತ್ ಚುನಾವಣೆಯಲ್ಲಿ ಎಡಗೈ ಸಮುದಾಯಕ್ಕೆ ಆದ್ಯತೆ ನೀಡಬೇಕೆಂದು ಹೈಕಮಾಂಡ್ ಗೆ ಈಗಾಗಲೇ ಮನವಿ ಮಾಡಲಾಗಿದೆ ಎಂದರು.
ವಕೀಲ ನರಸಿಂಹಮೂರ್ತಿ ಮಾತನಾಡಿ, ಜಿಲ್ಲೆಯಲ್ಲಿ ಎಡಗೈ ಸಮುದಾಯ ಓಟ್ ಬ್ಯಾಂಕ್ ಗೆ ಮಾತ್ರ ಸೀಮಿತವಾಗಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ 25 ಸ್ಥಾನಗಳಲ್ಲಿ ಒಂದಾದರೂ ಎಡಗೈ ಸಮುದಾಯಕ್ಕೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದರು. ಈಗಾಗಲೇ ರಾಜ್ಯದ ಕಾಂಗ್ರೆಸ್ ಪಕ್ಷದ ವರಿಷ್ಠರಿಗೆ ಎಚ್.ಕೆಂಚಮಾರಯ್ಯ ಅವರಿಗೆ ವಿಧಾನ ಪರಿಷತ್ ಟಿಕೆಟ್ ನೀಡುವಂತೆ ಮನವಿ ಮಾಡಲಾಗಿದ್ದು, ಮುಖಂಡರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.
ಸಮುದಾಯದ ಮುಖಂಡರಾದ ಸಿದ್ದಲಿಂಗಪ್ಪ, ಶಿವಕುಮಾರ್, ನಿವೃತ್ತ ಶಿಕ್ಷಕ ರಾಮಣ್ಣ, ಸಾಹಿತಿ ಅನುರಾಜ್, ಹನುಮಂತರಾಜು, ಕವಣದಾಲ ಶಿವಕುಮಾರ್ ಹಾಜರಿದ್ದರು.
ಕೆಂಚಮಾರಯ್ಯಗೆ ಎಂ.ಎಲ್.ಸಿ ಟಿಕೆಟ್ ಕೊಡಿ
Get real time updates directly on you device, subscribe now.
Next Post
Comments are closed.