ಹಾಳಾಗಿರುವ ರಸ್ತೆ ಅಭಿವೃದ್ಧಿಗೆ ಆಗ್ರಹ

152

Get real time updates directly on you device, subscribe now.

ಕುಣಿಗಲ್‌: ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ತಂಗಚಿಹಳ್ಳಿ, ಹೊಟ್ಟೆತಿಮ್ಮಯ್ಯನ ಪಾಳ್ಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹಾಳಾಗಿದ್ದು, ರಸ್ತೆ ಅಭಿವೃದ್ಧಿಗೊಳಿಸುವಂತೆ ಸಂಬಂಧಪಟ್ಟವರಿಗೆ ಮನವಿ ಮಾಡಿದ್ದರೂ ಸೂಕ್ತ ಕ್ರಮ ಕೈಗೊಳ್ಳದ ಕಾರಣ ಜಿಲ್ಲಾಮಟ್ಟದ ಅಧಿಕಾರಿಗಳು ಗಮನ ಹರಿಸಿ ಗ್ರಾಮದ ರಸ್ತೆ ಅಭಿವೃದ್ಧಿಗೊಳಿಸಲು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಮುಖ್ಯರಸ್ತೆಯಿಂದ ತಂಗಚಿಹಳ್ಳಿ, ಹೊಟ್ಟೆತಿಮ್ಮಯ್ಯನಪಾಳ್ಯದಿಂದ ಮುಂದೆ ಇನ್ನು ಹಲವಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಎರಡುವರೆ ಕಿ.ಮೀ ರಸ್ತೆ ಕಳೆದ ಹಲವಾರು ವರ್ಷಗಳಿಂದ ಅಭಿವೃದ್ಧಿಗೊಳಿಸಿಲ್ಲ, ಇದರಿಂದಾಗಿ ಗ್ರಾಮದ ಹಲವಾರು ವಿದ್ಯಾರ್ಥಿಗಳು ಶಾಲೆಗೆ ಆಗಮಿಸಲು, ಗ್ರಾಮಸ್ಥರು ಹಾಲು, ಇತರೆ ಉತ್ಪನ್ನ ಸಾಗಾಟ ಮಾಡಲು, ಅನಾರೋಗ್ಯಕ್ಕೆ ಒಳಗಾದವರನ್ನು ಚಿಕಿತ್ಸೆಗೆ ಸಾಗಿಸಲು ಪರದಾಡುವಂತಾಗಿದೆ, ರಸ್ತೆ ಅಭಿವೃದ್ಧಿಗೊಳಿಸಲು ಸ್ಥಳೀಯ ಪಂಚಾಯಿತಿ, ಶಾಸಕರಿಗೆ ಹಲವಾರು ಬಾರಿ ಮನವಿ ನೀಡಿದ್ದರೂ ಕ್ರಮ ಕೈಗೊಂಡಿಲ್ಲ, ಹೀಗಾಗಿ ಜಿಲ್ಲಾಮಟ್ಟದ ಅಧಿಕಾರಿಗಳು ಗ್ರಾಮದ ರಸ್ತೆ ಅಭಿವೃದ್ಧಿಗೆ ಸೂಕ್ತ ಗಮನಹರಿಸಿ ಕ್ರಮಕೈಗೊಂಡು ಗ್ರಾಮಸ್ಥರ ನೆರವಿಗೆ ಧಾವಿಸಬೇಕೆಂದು ಗ್ರಾಮದ ಮುಖಂಡರಾದ ತಿಮ್ಮೇಗೌಡ, ರಮೇಶ್‌, ಗೋಪಾಲ್‌, ಬೆಟ್ಟಸ್ವಾಮಯ್ಯ, ರಾಮಕೃಷ್ಣಯ್ಯ ಇತರರು ಒತ್ತಾಯಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!