ಆರ್‌.ರಾಜೇಂದ್ರ ಗೆಲುವು ನಿಶ್ಚಿತ: ಪರಂ

489

Get real time updates directly on you device, subscribe now.

ತುಮಕೂರು: ಇಡೀ ಜಿಲ್ಲೆಯಲ್ಲಿ ಕಾಂಗ್ರೆಸ್‌ ಪಕ್ಷದ ಬೆಂಬಲ ಇರುವ ಸದಸ್ಯರು ಹೆಚ್ಚಿದ್ದಾರೆ, ಕಾಂಗ್ರೆಸ್‌ ರಾಜೇಂದ್ರ ಗೆಲ್ಲುವ ವಿಶ್ವಾಸವಿದೆ, ಬಿಜೆಪಿ ಪಕ್ಷ ಗ್ರಾಪಂ ಮಟ್ಟದಲ್ಲಿ ಅಭಿವೃದ್ಧಿ ಮಾಡಿಲ್ಲ, ಬೆಲೆ ಏರಿಕೆ ತಡೆಯಲು ವಿಫಲರಾಗಿದ್ದಾರೆ, ಬೆಲೆ ಇಳಿಸಿ ಜನರಿಗೆ ರಕ್ಷಣೆ ಮಾಡುತ್ತೇನೆಂದು ಪ್ರಧಾನಿ ಹೇಳಿಲ್ಲ, ಪ್ರಧಾನಿ ಮಂತ್ರಿಗೆ ಕಂಟ್ರಾಕ್ಟರ್ಸ್‌ ಸಮೂಹ ಪತ್ರ ಬರೆದಿದ್ದಾರೆ,
ಲಂಚ ಕೊಡುವ ಬಗ್ಗೆ ಪತ್ರ ಬರೆದಿದ್ದಾರೆ, ಅಧಿಕೃತವಾಗಿ ನೋಂದಣಿಯಾಗಿರುವ ಸಂಘ ಪ್ರಧಾನಿಗೆ ಪತ್ರ ಬರೆದಿದೆ,
ದೇಶ ಇತಿಹಾಸದಲ್ಲಿ ಇದೇ ಮೊದಲು ಅನ್ನಿಸುತ್ತದೆ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್‌ ತಿಳಿಸಿದರು.
ಎಂ.ಎಲ್.ಸಿ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ರಾಜೇಂದ್ರ ನಾಮಪತ್ರ ಸಲ್ಲಿಸಿದ ನಂತರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಕಾಂಗ್ರೆಸ್‌ ಪಕ್ಷ ಖಂಡಿತವಾಗಿ ಹೆಚ್ಚಿನ ಸ್ಥಾನದಲ್ಲಿ ಗೆಲುವು ಸಾಧಿಸುತ್ತದೆ, ತುಮಕೂರಿನಲ್ಲಿ ಎರಡು ಪಕ್ಷದ ಅಭ್ಯರ್ಥಿಗಳು ಎದುರಾಳಿಗಳು, ಕಾಂಗ್ರೆಸ್ ಗೆ ಜಿಲ್ಲೆಯಲ್ಲಿ ಹೆಚ್ಚಿನ ಸದಸ್ಯರಿದ್ದಾರೆ, ನಮಗೆ ಅನುಮಾನ ಶಂಕೆಯಿದೆ, ಬಿಜೆಪಿ, ಜೆಡಿಎಸ್‌ ಈ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಂಡಿದೆ,
7 ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಹಾಕಿರುವುದು ಅನುಮಾನ ಮೂಡಿಸಿದೆ ಎಂದು ಹೇಳಿದರು.
ಈ ವೇಳೆ ಮಾಜಿ ಶಾಸಕರಾದ ಟಿ.ಬಿ.ಜಯಚಂದ್ರ, ಕೆ.ಎನ್‌.ರಾಜಣ್ಣ, ರಫಿಕ್ ಅಹಮದ್‌, ಅಭ್ಯರ್ಥಿ ಆರ್‌.ರಾಜೇಂದ್ರ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!