ಸತ್ತ ವ್ಯಕ್ತಿ ಬದುಕಿ ಬಂದಾಗ!?

6,680

Get real time updates directly on you device, subscribe now.

ಕೊಡಿಗೇನಹಳ್ಳಿ: ಮೃತ್ತಪಟ್ಟಿದ್ದಾನೆ ಎಂದು ವ್ಯಕ್ತಿಯೊಬ್ಬರ ಶವ ಸಂಸ್ಕಾರ ಮಾಡಲಾಗಿತ್ತು, ಆದರೆ ಆ ವ್ಯಕ್ತಿ ಈಗ ಬಸ್‌ ಇಳಿದು ಮನೆಗೆ ಬಂದು ಅಚ್ಚರಿ ಮೂಡಿಸಿದ್ದಾನೆ.
ಕೊಡಿಗೇನಹಳ್ಳಿ ಹೋಬಳಿಯ ಚಿಕ್ಕಮಾಲೂರು ಗ್ರಾಪಂ ಅಧ್ಯಕ್ಷೆ ಪ್ರೇಮಲತಾ ಅವರ ತಂದೆ ನಾಗರಾಜಪ್ಪ ಎಂಬುವವರು ಮಂಗಳವಾರ ಬೆಳಗ್ಗೆ ಮನೆಗೆ ಬಂದಾಗ ಕುಟುಂಬಸ್ಥರು ಆಶ್ಚರ್ಯವಾಗಿದ್ದಾರೆ.
ಕಳೆದ 3 ತಿಂಗಳ ಹಿಂದೆ ಕುಡಿತಕ್ಕೆ ದಾಸನಾಗಿದ್ದ ನಾಗರಾಜಪ್ಪ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ದಾಖಲಾಗಿದ್ದರು, ನಂತರ ಬೇರೊಂದು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದಾಗ ಇಲ್ಲಿಂದ ಈತ ಪರಾರಿಯಾಗಿದ್ದ ಎನ್ನಲಾಗಿದೆ, ಆದರೆ ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಮೆಡಿಕಲ್‌ ಸರ್ಟಿಫಿಕೆಟ್‌ ಹಾಗೂ ಪೋಸ್ಟ್ ಮಾರ್ಟಮ್‌ ರಿಪೋರ್ಟ್‌ ನೀಡಿ ನಾಗರಾಜಪ್ಪನಿಗೆ ಹೋಲಿಕೆಯಾಗುವ ಬೇರೊಂದು ಶವ ನೀಡಿದ್ದಾರೆ ಎನ್ನಲಾಗಿದೆ, ಆದರೆ ಹಿಂದೂ ಸಂಪ್ರದಾಯದಂತೆ ಶವ ಸಂಸ್ಕಾರ ಮಾಡಿ ತಿಥಿ ಮತ್ತು ಮಾಡಬೇಕಿದ್ದ ಕಾರ್ಯ ಮುಗಿಸಲಾಗಿತ್ತು.
ಆದರೆ ಈಗ ಮರಳಿ ಮನೆಗೆ ಬಂದಿರುವ ತಂದೆಯನ್ನು ಕಂಡ ಕುಟುಂಬಸ್ಥರು ಬೆರಗಾಗಿದ್ದು ಮತ್ತೆ ಇವರು ಶವ ಸಂಸ್ಕಾರ ಮಾಡಿದ ವ್ಯಕ್ತಿ ಯಾರು ಎಂಬುದು ಹಲವು ಅನುಮಾನಗಳಿಗೆ ಕಾರಣವಾಗಿದೆ, ಸದರಿ ಪ್ರಕರಣ ಕೊಡಿಗೇನಹಳ್ಳಿ ಪೊಲೀಸ್‌ ಠಾಣೆ ಮೆಟ್ಟಿಲೇರಿದೆ.
ಈ ಬಗ್ಗೆ ಅವರ ದ್ವಿತೀಯ ಪುತ್ರಿ ಮಾತನಾಡಿ, ಇದೊಂದು ಪವಾಡದಂತಿದೆ, ನಮ್ಮ ತಂದೆ ಮರಳಿ ಬಂದಿರುವುದು ತುಂಬಾ ಖುಷಿ ತಂದಿದೆ, ಇನ್ನು ಹೆಚ್ಚು ಕಾಳಜಿಯಿಂದ ನೋಡಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!