ಸಾಲಕ್ಕೆ ಹೆದರಿ ಆತ್ಮಹತ್ಯೆ

199

Get real time updates directly on you device, subscribe now.

ಕೊರಟಗೆರೆ: ಕೈ ಸಾಲಕ್ಕೆ ಹೆದರಿ ಕಾಂಡಿಮೆಂಟ್ಸ್ ಮಾಲೀಕ ನೇಣಿಗೆ ಶರಣಾಗಿರುವ ಘಟನೆ ಕೋಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಾಲೂಕಿನ ಕೋಳಾಲ ಹೋಬಳಿ ಇರಕಸಂದ್ರ ಕಾಲೋನಿಯ ಎಸ್.ಎಸ್.ಕಾಂಡಿಮೆಂಟ್ಸ್ ಮಾಲೀಕ ಶಿವಕುಮಾರ್ (55) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇರಕಸಂದ್ರ ಕಾಲೋನಿ ಬಸ್ ನಿಲ್ದಾಣದಲ್ಲಿ ಕಾಂಡಿಮೆಂಟ್ಸ್ ನಡೆಸುತ್ತಿದ್ದು ವ್ಯಾಪಾರದಲ್ಲಿ ನಷ್ಟವಾಗಿ ಕೈಸಾಲ ಮಾಡಿಕೊಂಡು ಸಾಲಗಾರರ ಕಾಟಕ್ಕೆ ಕಳೆದ ಒಂದು ತಿಂಗಳಿಂದ ಅಂಗಡಿ ಸ್ಥಗಿತಗೊಳಿಸಿದ್ದರು. ಸಾಲದ ಬಾಧೆಗೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಸಿಪಿಐ ಸಿದ್ದರಾಮೇಶ್ವರ ಹಾಗೂ ಪಿಎಸ್ಐ ಮಹಾಲಕ್ಷ್ಮಮ್ಮ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!