ಪ್ರತ್ಯೇಕ ಪ್ರಕರಣದಲ್ಲಿ ಮೂವರು ಸಾವು

288

Get real time updates directly on you device, subscribe now.


ಕುಣಿಗಲ್: ಅಮೃತೂರು ಹಾಗೂ ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಮೂವರು ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಅಮೃತೂರು ಪೊಲೀಸ್ ಠಾಣೆ ವ್ಯಾಪ್ತಿಯ ಪುಟ್ಟನಪಾಳ್ಯ ಗ್ರಾಮದ ಬಳಿ ಜೆಸಿಬಿ ವಾಹನ ಚಾಲಕನ ನಿರ್ಲಕ್ಷ್ಯಕ್ಕೆ ಬೈಕ್ ಅಪಘಾತವಾಗಿದ್ದು ಅಮೃತೂರು ಗ್ರಾಮದ ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಮೃತರನ್ನು ಸತೀಶ್ ಕುಮಾರ (30) ಹಾಗೂ ಪರಶುರಾಮ (26) ಎಂದು ಗುರುತಿಸಲಾಗಿದೆ. ಘಟನೆ ಸಂಬಂಧಿಸಿದಂತೆ ಮೃತರ ಸಂಬಂಧಿಕರು ನೀಡಿದ ದೂರಿನ ಮೇರೆಗೆ ಅಮೃತೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕುಣಿಗಲ್ ಪಟ್ಟಣ ವ್ಯಾಪ್ತಿಯಲ್ಲಿನ ಮದ್ದೂರು ರಸ್ತೆಯಲ್ಲಿನ ಕಟ್ಟಡವೊಂದರಲ್ಲಿ ಗಾರೆ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಅಕಸ್ಮಾತ್ ವಿದ್ಯುತ್ ಅಘಾತವಾಗಿ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಮೃತನು ತಮಿಳುನಾಡಿನ ತಿರಪ್ಪೂರಿನವರಾಗಿದ್ದು ಘಟನೆಗೆ ಸಂಬಂಧಿಸಿದಂತೆ ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Get real time updates directly on you device, subscribe now.

Comments are closed.

error: Content is protected !!