ಮಾಧುಸ್ವಾಮಿಗೆ ಕೋವಿಡ್‌ ಪಾಸಿಟಿವ್

259

Get real time updates directly on you device, subscribe now.

ಚಿಕ್ಕನಾಯಕನಹಳ್ಳಿ: ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೆ ಕಿವಿ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದು, ವರದಿಯಲ್ಲಿ ಪಾಸಿಟಿವ್‌ ಬಂದಿದೆ.
ತಾಲೂಕಿನಲ್ಲಿ ಸೋಮವಾರ ಸಚಿವರು ಆಯುಷ್‌ ಆಸ್ಪತ್ರೆಯಲ್ಲಿ ಬೂಸ್ಟರ್‌ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ್ದರು, ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಿತರಕ್ಷಣಾ ಸಮಿತಿ ಸಭೆ ನಡೆಸಿದ್ದು ಸೇರಿದಂತೆ ಇನ್ನಿತರ ಸಭೆಗಳಲ್ಲಿ ಭಾಗವಹಿಸಿದ್ದು, ಸಭೆಗಳಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು. ಸಭೆಯಲ್ಲಿ ಭಾಗವಹಿಸಿದವರಿಗೂ ಕೊರೊನಾ ಪರೀಕ್ಷೆ ನಡೆಸುವುದಾಗಿ ತಾಲೂಕು ಆರೋಗ್ಯ ಇಲಾಖೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!