ಅರ್ಹರಿಗೆ ಭೂಮಿ ಮಂಜೂರು: ಗೌರಿಶಂಕರ್

ಅರಣ್ಯದಲ್ಲಿ ಉಳುಮೆ ಮಾಡುವವರಿಗೆ ತೊಂದರೆ ಕೊಡಬೇಡಿ

429

Get real time updates directly on you device, subscribe now.

ತುಮಕೂರು: ಸರ್ಕಾರದಿಂದ ಅನುದಾನ ತರಲು ಸಾಕಷ್ಟು ಕಷ್ಟ ಅನುಭವಿಸಿದ್ದೇವೆ, ಅಧಿಕಾರಿಗಳು ಶ್ರದ್ಧೆ ವಹಿಸಿ ಕಾರ್ಯನಿರ್ವಹಿಸಿ ಅನುದಾನ ಸದ್ಬಳಕೆ ಮಾಡಬೇಕೆಂದು ಎಂದು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್‌ ಸೂಚನೆ ನೀಡಿದರು.

ತಹಶೀಲ್ದಾರ್‌ ಕಾರ್ಯಾಲಯದಲ್ಲಿ ಬಗರ್‌ ಹುಕುಂ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದ ಅವರು, ಬಗರ್‌ಹುಕುಂ ಸಮಿತಿ ಕೋರಂ ಕೊರತೆಯಿಂದ ಸಭೆ ರದ್ದುಗೊಂಡ ನಂತರ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ಗ್ರಾಮಾಂತರ ಕ್ಷೇತ್ರದ ಡೀಮ್ಡೌ ಅರಣ್ಯದಲ್ಲಿ ಉಳುಮೆ ಮಾಡುತ್ತಿರುವವರನ್ನು ಒಕ್ಕಲೆಬ್ಬಿಸುವುದು ಬೇಡ, ರೈತರಿಗೆ ಅನಗತ್ಯ ತೊಂದರೆ ನೀಡಬೇಡಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾನೂನು ಸಚಿವರಾದ ಮಾಧುಸ್ವಾಮಿ ಅವರು ಡೀಮ್ಡೌ ಅರಣ್ಯ ಪ್ರದೇಶವವನ್ನು ಕೈಬಿಡಬೇಕೆಂದು ಸುಪ್ರೀಂಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ್ದಾರೆ, ಇದರಿಂದ ರಾಜ್ಯದಲ್ಲಿ ಭೂ ರಹಿತರಿಗೆ ಭೂಮಿ ಹಂಚಿ ಮಾಡಲು ಸಾಧ್ಯವಿದ್ದು, ಡೀಮ್ಡೌ ಅರಣ್ಯದಿಂದ ಜನರು ಅನುಭವಿಸುತ್ತಿರುವ ಸಮಸ್ಯೆಗೆ ಮುಕ್ತಿ ದೊರೆಯಲಿದೆ, ಪಕ್ಷಾತೀತವಾಗಿ ಅಭಿವೃದ್ಧಿ ಪರ ಚಿಂತಿಸುವ ರಾಜಕಾರಣಿ ಎಂದು ಹೇಳಿದರು.
ಗ್ರಾಮಾಂತರದಲ್ಲಿ ರೈತರನ್ನು ಒಕ್ಕಲೆಬ್ಬಿಸುವ ಪ್ರಯತ್ನ ನಡೆಯುತ್ತಿಲ್ಲವಾದರೂ ವೃಥಾ ರೈತರಿಗೆ ತೊಂದರೆ ನೀಡಬೇಡಿ, ಉಳುಮೆ ಮಾಡುತ್ತಿರುವ ರೈತರಿಗೆ ತೊಂದರೆ ನೀಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಡೀಮ್ಡೌ ಅರಣ್ಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಆದೇಶ ನೀಡುವವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚನೆ ನೀಡಿದರು.
ಬಗರ್‌ಹುಕುಂ ಸಮಿತಿ ಇದುವರೆಗೆ ಮೂರಕ್ಕೂ ಹೆಚ್ಚು ಸಭೆಗಳನ್ನು ನಡೆಸಿ ಅರ್ಹ ರೈತರಿಗೆ ಸಾಗುವಳಿ ಚೀಟಿ ವಿತರಣೆಗೆ ಕ್ರಮ ವಹಿಸಲಾಗಿದೆ, ಅರ್ಜಿ ಸಲ್ಲಿಸಿರುವ ರೈತರು ನಿಯಮಗಳ ಪ್ರಕಾರ ಅರ್ಹರಾಗಿದ್ದರೆ, ಅವರಿಗೆ ಭೂಮಿ ಮಂಜೂರು ಮಾಡಲು ಸಮಿತಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ಗ್ರಾಮಾಂತರ ಕ್ಷೇತ್ರದಲ್ಲಿ ರಸ್ತೆಗಳು ಅಭಿವೃದ್ಧಿಗೊಂಡಿದ್ದು, ಭಾರ ಮಿತಿಯನ್ನು ನಿಗದಿಪಡಿಸುವಂತೆ ಸೂಚಿಸಿದ ಅವರು, ಓವರ್‌ ಲೋಡ್‌ನಿಂದ ರಸ್ತೆಗಳು ಹಾಳಾಗಲಿದ್ದು, ಭಾರ ಮಿತಿ ನಿಗದಿಪಡಿಸುವ ಮೂಲ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದ ಅವರು, ಗ್ರಾಮಾಂತರದಲ್ಲಿ ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಮಾಡುವುದು ಬೇಡ, ಪಕ್ಷಾತೀತವಾಗಿ ಸೌಲಭ್ಯ ನೀಡುವಂತೆ ಸೂಚಿಸಿದರು.
ಜಾತ್ರೆ ರದ್ದು: ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಪ್ರಸಿದ್ಧ ಸೀಬಿ ನರಸಿಂಹಸ್ವಾಮಿ ಜಾತ್ರೆ, ಹೆತ್ತೇನಹಳ್ಳಿ ಮಾರಮ್ಮನ ಜಾತ್ರಾ ಮಹೋತ್ಸವದಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸುವ ಸಾಧ್ಯತೆ ಇದ್ದು, ಕೋವಿಡ್‌ ಹಿನ್ನೆಲೆಯಲ್ಲಿ ಸರ್ಕಾರ ಈಗಾಗಲೇ ರಾಜ್ಯದಲ್ಲಿ ಜಾತ್ರಾ ಮಹೋತ್ಸವ ರದ್ದುಗೊಳಿಸಿದ್ದು, ಗೂಳಹರಿವೆ, ಸೀಬಿ, ಹೆತ್ತೇನಹಳ್ಳಿ ಸೇರಿದಂತೆ ಎಲ್ಲಾ ಜಾತ್ರಾ ಮಹೋತ್ಸವಗಳನ್ನು ರದ್ದುಗೊಳಿಸಿ, ಪೂಜೆಗೆ ಅವಕಾಶ ನೀಡಬೇಕೆಂದು ಸೂಚಿಸಿದರು.
ಕೋವಿಡ್‌ ಹೆಚ್ಚಳವಾಗುವ ಭೀತಿ ಇದ್ದು, ಜಾತ್ರೆ ರದ್ದು ಇದ್ದು ನಾಗರಿಕರು ಸರ್ಕಾರ ಸೂಚಿಸಿರುವ ಕೋವಿಡ್‌ ನಿಯಮಾವಳಿಗಳನ್ನು ಪಾಲಿಸಬೇಕು, ಜಾತ್ರಾ ಸಮಯದಲ್ಲಿ ಗುಂಪುಗೂಡದೆ, ಸಾಮಾಜಿಕ ಅಂತರ ಕಾಯ್ದುಕೊಂಡು ದೇವರಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು, ನಂತರ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ತಹಶೀಲ್ದಾರ್‌ ಜಿ.ವಿ.ಮೋಹನ್‌ಕುಮಾರ್‌, ಕಂದಾಯ ಅಧಿಕಾರಿಗಳಾದ ಜಯಪ್ರಕಾಶ್‌, ಮಹೇಶ್‌, ಶಿವಣ್ಣ, ಜೆಡಿಎಸ್‌ ಮುಖಂಡರಾದ ಹಿರೇಹಳ್ಳಿ ಮಹೇಶ್‌, ಬೆಳಗುಂಬ ವೆಂಕಟೇಶ್‌, ಸುರೇಶ್‌ ಸೇರಿದಂತೆ ಬಗರ್‌ಹುಕುಂ ಸಮಿತಿ ಸದಸ್ಯರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಇದ್ದರು.

Get real time updates directly on you device, subscribe now.

Comments are closed.

error: Content is protected !!