ಪೊಲೀಸ್‌ ಭದ್ರತೆಯಲ್ಲಿ ಶಾಲೆಗಳು ಪುನರಾರಂಭ

232

Get real time updates directly on you device, subscribe now.

ತುಮಕೂರು: ಹಿಜಾಬ್‌, ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ರಜೆ ಘೋಷಿದ್ದ 9 ಮತ್ತು 10ನೇ ತರಗತಿಗಳು ಇಂದಿನಿಂದ ಪುನರಾರಂಭಗೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲೆಗಳ ಬಳಿ ಪೊಲೀಸ್‌ ಭದ್ರತೆಯನ್ನು ಒದಗಿಸಲಾಗಿದೆ.

ಹೈಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದಿನಿಂದ 9 ಮತ್ತು 10ನೇ ತರಗತಿಗಳನ್ನು ಪುನರಾರಂಭಿಸುವಂತೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಶಾಲೆಗಳ ಸುತ್ತಮುತ್ತ 200 ಮೀಟರ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಪೊಲೀಸ್‌ ಭದ್ರತೆಯೊಂದಿಗೆ ಶಾಲೆಗಳು ಆರಂಭವಾಗಿವೆ. ಎಂದಿನಂತೆ ಶಾಲಾ ಮಕ್ಕಳು ಶಾಲಾ ಸಮವಸ್ತ್ರ ಧರಿಸಿ ಶಾಲೆಗಳಿಗೆ ತೆರಳಿದ ದೃಶ್ಯಗಳು ಕಂಡು ಬಂದವು.
ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಶಾಲೆಗಳ ಮುಂಭಾಗದಲ್ಲೇ ಪೊಲೀಸ್‌ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗಾಗಲೇ ಜಿಲ್ಲಾಧಿಕಾರಿಗಳು ತುಮಕೂರು ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐಗಳಿಗೆ ಹೈಕೋರ್ಟ್‌ ಆದೇಶ ಪಾಲಿಸುವ ಮೂಲಕ ಅಗತ್ಯ ಕ್ರಮಗಳೊಂದಿಗೆ ಶಾಲೆಗಳನ್ನು ಆರಂಭಿಸುವಂತೆ ಸೂಚನೆ ನೀಡಿದ್ದು, ಅದರಂತೆ ತುಮಕೂರು ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ಪ್ರೌಢಶಾಲೆಗಳು ಆರಂಭವಾಗಿವೆ.
ಶಾಲೆಗಳಲ್ಲಿ ಎಂದಿನಂತೆ ಶಾಂತಿಯುತವಾಗಿ ತರಗತಿಗಳು ನಡೆದಿವೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!