ಶಿಕ್ಷಕ ಯೋಗಣ್ಣ ನಿಧನ

282

Get real time updates directly on you device, subscribe now.

ಕೊರಟಗೆರೆ: ಪಟ್ಟಣದ ಶ್ರೀಕಾಳಿದಾಸ ವಿದ್ಯಾವರ್ಧಕ ಪ್ರೌಢಶಾಲೆಯಲ್ಲಿ ಸಮಾಜ ವಿಜ್ಞಾನ ವಿಷಯ ಭೋದಿಸುತ್ತಿದ್ದ ಶಿಕ್ಷಕ ಯೋಗಣ್ಣ ಅವರು ಬುಧವಾರ ಬೆಳಗ್ಗೆ 4 ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಕಳೆದ ಕೆಲವು ತಿಂಗಳಿನಿಂದ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಅನಾರೋಗ್ಯದಿಂದ ಬಳಲುತ್ತಿದ್ದರು, ತುಮಕೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಯಲ್ಲೂ ಚಿಕಿತ್ಸೆ ಪಡೆದಿದ್ದರು ಚಿಕಿತ್ಸೆಯು ಫಲಕಾರಿಯಾಗದೆ ಬುಧವಾರ ಬೆಳಗ್ಗೆ 4 ಕ್ಕೆ ನಿಧನರಾದರು.
ಮೃತರು ಹೆಂಡತಿ ಮತ್ತು ಇಬ್ಬರು ಹೆಣ್ಣು ಮಕ್ಕಳು, ತಂದೆ, ತಾಯಿ, ಅಣ್ಣ ಹಾಗೂ ಬಂಧುಗಳನ್ನು ಅಗಲಿದ್ದಾರೆ.
ಕಾಳಿದಾಸ ಪ್ರೌಢಶಾಲೆಯ ಶಿಕ್ಷಕರು, ಭೋದಕ- ಭೋದಕೇತರ ವರ್ಗ, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳಿಂದ ಮೌನಾಚರಣೆ ಮಾಡಿ ಗೌರವ ಸೂಚಿಸಿದರು.

Get real time updates directly on you device, subscribe now.

Comments are closed.

error: Content is protected !!