ವಿವಿ ಕುಲಪತಿಗೆ ವಿಜ್ಞಾನ-ತಂತ್ರಜ್ಞಾನ ಅಕಾಡೆಮಿ ಪ್ರಶಸ್ತಿ

144

Get real time updates directly on you device, subscribe now.

ತುಮಕೂರು: ಆಜಾದಿಕ ಆಮೃತ ಮಹೋತ್ಸವದ ಸ್ವತಂತ್ರ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಕರ್ನಾಟಕ ಸರ್ಕಾರ ವಿಜ್ಞಾನ ಸಪ್ತಾಹದ ಅಂಗವಾಗಿ ಫೆ.22 ರಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡಮಿ, ಕರ್ನಾಟಕ ಸರ್ಕಾರ ಬೆಂಗಳೂರು ಇವರು ನೀಡುವ ಪ್ರತಿಷ್ಠಿತ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡಮಿ ಪ್ರಶಸ್ತಿಗೆ ತುಮಕೂರು ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿ ಕರ್ನಲ್‌ ಪೊ.ವೈ.ಎಸ್‌ ಸಿದ್ದೇಗೌಡ ಅವರು ಭಾಜನರಾಗಿದ್ದಾರೆ.

ಪ್ರಶಸ್ತಿಯನ್ನು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್‌ ನಾರಾಯಣ, ಸಂಸದ ಹಾಗೂ ಮಾಜಿ ಮುಖ್ಯ ಮಂತ್ರಿ ಸದಾನಂದ ಗೌಡ, ಶಾಸಕ ವಿಶ್ವನಾಥ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡಮಿ ಸದಸ್ಯರು ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಸಂಶೋಧನಾ ಕ್ಷೇತ್ರದಲ್ಲಿನ ದೇಶದ ಪ್ರತಿಷ್ಠಿತ ವಿಜ್ಞಾನಿಗಳ ಸಾಲಿನಲ್ಲಿ ತುಮಕೂರು ವಿಶ್ವವಿದ್ಯಾಲಯ ಕುಲಪತಿ ಅವರು ಪ್ರಶಸ್ತಿ ಪಡೆದಿರುವುದಕ್ಕೆ ರಾಷ್ಟ್ರ ಮಟ್ಟದಲ್ಲಿ ವಿಶ್ವವಿದ್ಯಾಲಯ ಕೀರ್ತಿ ಹೆಚ್ಚಿದ್ದು ವಿಶ್ವವಿದ್ಯಾಲಯದ ಸಿಬ್ಬಂದಿ ಹಾಗೂ ಅಪಾರ ಆಪ್ತ ಬಳಗ ಅಭಿನಂದನ ಶುಭಾಶಯ ತಿಳಿಸಿ ಸಂತಸ ವ್ಯಕ್ತಪಡಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!