ಬೊಮ್ಮಾಯಿ ಬಜೆಟ್‌ ಜನಪರವಾಗಿದೆ: ಎಂ.ಎಲ್.ಎ

142

Get real time updates directly on you device, subscribe now.

ತುಮಕೂರು: ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳನ್ನು ಪ್ರಾರಂಭಿಸಲು ಈ ಬಜೆಟ್ ನಲ್ಲಿ ಅನುದಾನ ಕಲ್ಪಿಸಿ ಅವಕಾಶ ಮಾಡಿಕೊಟ್ಟಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಶಾಸಕ ಜ್ಯೋತಿಗಣೇಶ್‌ ತಿಳಿಸಿದ್ದಾರೆ.

ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳನ್ನು ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಾರಂಭ ಮಾಡುವುದರಿಂದ ಸಾರ್ವಜನಿಕರಿಗೆ ನುರಿತ ವೈದ್ಯರ ವೈದ್ಯಕೀಯ ಸೇವೆ ಸಿಗುವಂತಾಗುತ್ತದೆ. ಇದರಿಂದ ರೋಗಿಗಳಿಗೆ ರೋಗ ತಪಾಸಣೆ ಹಾಗೂ ಸೂಕ್ತ ಚಿಕಿತ್ಸೆ ಪಡೆಯಲು ಸಹಾಯವಾಗುತ್ತದೆ.
ತುಮಕೂರು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ಈ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ನ್ನು ತರಲು ಹಿಂದಿನಿಂದಲೂ ಶ್ರಮಿಸಿದ ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್‌ ಅವರಿಗೆ ಜಿಲ್ಲೆಯ ಜನರ ಪರವಾಗಿ ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್‌ ಅಭಿನಂದನೆ ಸಲ್ಲಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!