ಅಪಘಾತದಲ್ಲಿ ಗಾಯಗೊಂಡಿದ್ದ ಶಿಕ್ಷಕ ಸಾವು

185

Get real time updates directly on you device, subscribe now.

ತುರುವೇಕೆರೆ: ತಾಲೂಕಿನ ಬದರಿಕಾಶ್ರಮ ಗೇಟ್ ಬಳಿ ಕಾರು ಹಾಗೂ ಬೈಕ್ ಡಿಕ್ಕಿ ಸಂಭವಿಸಿದ ಅಪಘಾತದಲ್ಲಿ ತೀವ್ರತರ ಗಾಯಗೊಂಡಿದ್ದ ಇಬ್ಬರು ಶಿಕ್ಷಕರ ಪೈಕಿ ಓರ್ವ ಶಿಕ್ಷಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಮೃತ ಶಿಕ್ಷಕರನ್ನು ಮಾವಿನಕೆರೆ ಸರಕಾರಿ ಶಾಲೆಯ ಶಿಕ್ಷಕ ನಂಜುಂಡೇಶ್ವರರಾಜ್ ಅರಸ್ (55) ಎಂದು ಗುರುತಿಸಲಾಗಿದೆ. ಶಾಲೆಯಿಂದ ತುರುವೇಕೆರೆ ಪಟ್ಟಣದಲ್ಲಿನ ತಮ್ಮ ನಿವಾಸಕ್ಕೆ ಮತೋರ್ವ ಶಿಕ್ಷಕರೊಂದಿಗೆ ಬೈಕ್ನೊಂದಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ತುರುವೇಕೆರೆ ಪಟ್ಟಣದಿಂದ ಬೆಂಗಳೂರಿನತ್ತ ಪಯಣ ಬೆಳೆಸುತ್ತಿದ್ದ ಜೆಡಿಎಸ್ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ದೊಡ್ಡಾಘಟ್ಟಚಂದ್ರೇಶ್ ಗಾಯಾಳುಗಳನ್ನು ತುರುವೇಕೆರೆ ಆಸ್ಪತ್ರೆಗೆ ತಮ್ಮ ಕಾರಿನಲ್ಲಿಯೇ ಸಾಗಿಸುವ ಮೂಲಕ ಮಾನವೀಯತೆ ಮೆರೆದಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ತೀವ್ರತರ ಗಾಯಗೊಂಡಿದ್ದ ಶಿಕ್ಷಕ ನಂಜುಂಡೇಶ್ವರರಾಜ್ ಅರಸ್ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದ್ದಾಗಿ ಪೋಲೀಸರು ತಿಳಿಸಿದ್ದಾರೆ.
ಮೃತ ಶಿಕ್ಷಕರ ಸಂಬಂಧಿಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುವ ಪೋಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.

Get real time updates directly on you device, subscribe now.

Comments are closed.

error: Content is protected !!