ದುಷ್ಕರ್ಮಿಗಳಿಂದ ಗುಡಿಸಲಿಗೆ ಬೆಂಕಿ

252

Get real time updates directly on you device, subscribe now.

ಗುಬ್ಬಿ: ತಾಲ್ಲೂಕಿನ ನಿಟ್ಟೂರು ಹೋಬಳಿಯ ಎನ್.ಹೊಸಹಳ್ಳಿ ಗ್ರಾಮದಲ್ಲಿ ವಾಸವಾಗಿರುವ ದಲಿತ ಕುಟುಂಬದ ವಸಂತಕುಮಾರಿ ಎಂಬುವವರ ಜಮೀನಿನಲ್ಲಿ ವಾಸವಿದ್ದ ಗುಡಿಸಲಿಗೆ ದುಷ್ಕರ್ಮಿಗಳು ಯಾರು ಇಲ್ಲದ ವೇಳೆ ಬೆಂಕಿ ಇಟ್ಟಿದ್ದಾರೆ ಎಂದು ಸಂತ್ರಸ್ತೆ ವಸಂತಕುಮಾರಿ ತಮ್ಮ ನೋವು ವ್ಯಕ್ತಪಡಿಸಿದರು.

ಗುಡಿಸಲಿಗೆ ಬೆಂಕಿ ಬಿದ್ದ ಹಿನ್ನೆಲೆಯಲ್ಲಿ ಸಂಗ್ರಹಿಸಲಾಗಿದ್ದ ದವಸ ಧಾನ್ಯ, ಗೃಹ ಬಳಕೆಯ ವಸ್ತುಗಳು ಹಾಗೂ ತೆಂಗು ಸೇರಿದಂತೆ ಸುಮಾರು ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ ಬೆಂಕಿ ಬಿದ್ದ ಸಂದರ್ಭದಲ್ಲಿ ಗುಡಿಸಿಲಿನಲ್ಲಿ ಯಾರು ಇಲ್ಲದೇ ಇದ್ದುದ್ದರಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಘಟನೆಗೆ ಯಾರು ಕಾರಣ ಎಂಬುದು ತಿಳಿದುಬಂದಿಲ್ಲ ಆದರೆ ಹಳೇ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಿದ್ದಾರೆ ಎಂದ ಸಂತ್ರಸ್ತೆ ಈ ಸಂಬಂಧ ಚೇಳೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!