ಮಾಜಿ ಪ್ರಧಾನಿ ದೇವೇಗೌಡರೇ ನಿಜವಾದ ಅಹಿಂದ ನಾಯಕರು: ಎಂ.ಟಿ.ಕೆ

299

Get real time updates directly on you device, subscribe now.

ತುರುವೇಕೆರೆ: ಹಿಂದುಳಿದ ವರ್ಗಕ್ಕೆ ರಾಜಕೀಯ ಮೀಸಲಾತಿ ಕಲ್ಪಿಸಿದ್ದ ಮಾಜಿ ಪ್ರಧಾನಿ ದೇವೇಗೌಡರೇ ನಿಜವಾದ ಅಹಿಂದ ನಾಯಕರು ಎಂದು ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು.
ಪಟ್ಟಣದಲ್ಲಿ ಜೆ.ಡಿ.ಎಸ್. ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು ಅಹಿಂದ ವರ್ಗದವರಿಗೆ ರಾಜಕೀಯ ಶಕ್ತಿ ತುಂಬುವ ನಿಟ್ಟಿನಲ್ಲಿ ಹೆಚ್.ಡಿ.ದೇವೇಗೌಡರು ತಾವು ಮುಖ್ಯಮಂತ್ರಿಯಾಗಿದ್ದ ವೇಳೆ ರಾಜಕೀಯ ಮೀಸಲಾತಿ ಜಾರಿಗೆ ತಂದಿದ್ದರು. ಬಿಜೆಪಿ ನೇತೃತ್ವದ ರಾಜ್ಯ ಸರಕಾರಕ್ಕೆ ಅಹಿಂದ ವರ್ಗದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಅಹಿಂದ ನಾಯಕರೆಂದು ಹೇಳಿಕೊಳ್ಳುವ ಸಿದ್ದರಾಮಯ್ಯ ಅಹಿಂದ ವರ್ಗಕ್ಕೆ ನೀಡಿದ ಕೊಡುಗೆ ಶೂನ್ಯ. ಓಟ್ ಬ್ಯಾಕಿಂಗ್ ರಾಜಕಾರಣಕ್ಕಾಗಿ ಅಹಿಂದ ಹೆಸರೇಳುತ್ತಿರುವ ಸಿದ್ದರಾಮಯ್ಯ ಅಹಿಂದ ನಾಯಕರೆಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಕುಟುಕಿದರು.
ರೈತರ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ನೀಡದ ಬೆಸ್ಕಾಂ ರೈತರ ಬದುಕಿನೊಂದಿಗೆ ಚಲ್ಲಾಟವಾಡುತ್ತಿದೆ. ಸತತ ೭ ಗಂಟೆ ಮೂರು ಪೇಸ್ ವಿದ್ಯುತ್ ನೀಡುವ ಬಗ್ಗೆ ಮಾತನಾಡಿದ್ದ ರಾಜ್ಯ ಸರಕಾರ ಆಡಿದ್ದ ಮಾತನ್ನು ಮರೆತಿದೆ.ರೈತನಿಂದ ರಾಗಿ ಖರೀದಿಸಲು ಸಣ್ಣ ಹಾಗೂ ದೊಡ್ಡ ಹಿಡುವಳಿದಾರ ಎಂಬ ತಾರತಮ್ಯ ಅನುಸರಿಸುತ್ತಿದೆ. ತಾಲೂಕಿನ ರಾಗಿ ಖರೀದಿ ಕೇಂದ್ರದ ಸಿಬ್ಬಂದಿ ರಾಜಣ್ಣ ರೈತರನ್ನು ಶೋಷಿಸುತ್ತಿದ್ದಾರೆ. ರೈತರಿಂದ ರಾಗಿ ಖರೀದಿಸಿದ ನಂತರ ಚೀಲದ ಹಣವನ್ನು ನೀಡದೇ ೫೦ ಸಾವಿರ ಚೀಲದ ಹಣವನ್ನು ಗುಳುಂ ಮಾಡುತ್ತಿದ್ದಾರೆ. ಸರಕಾರ ಈ ಕೂಡಲೇ ಎಲ್ಲಾ ರೈತರಿಂದ ರಾಗಿ ಖರೀದಿಸಬೇಕು ಹಾಗೂ ರಾಗಿ ಖರೀದಿ ಕೇಂದ್ರದ ಅವ್ಯವಹಾರಕ್ಕೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದರು.

Get real time updates directly on you device, subscribe now.

Comments are closed.

error: Content is protected !!