ಮನನೊಂದು ವ್ಯಕ್ತಿ ಆತ್ಮಹತ್ಯೆ

263

Get real time updates directly on you device, subscribe now.

ಕೊಡಿಗೇನಹಳ್ಳಿ: ಕೊಡಿಗೇನಹಳ್ಳಿ ಹೋಬಳಿಯ ಚಿಕ್ಕಮಾಲೂರು ಗ್ರಾಮದ ನಾಗರಾಜು (೪೦) ವರ್ಷದ ವ್ಯಕ್ತಿ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಚಿಕ್ಕಮಾಲೂರು ಗ್ರಾಮದ ವೆಂಕಟೇಶ್, ರಾಮಚಂದ್ರ, ನಾಗಮಣಿ ಎಂಬುವವರು ನಾಗರಾಜು ಎಂಬಾತನಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಕಾರಣ ಮನನೊಂದ ನಾಗರಾಜು ಮನೆಯ ಹಿಂಭಾಗದಲ್ಲಿದ್ದ ಕುರಿ ಶೆಡ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಸ್ಥಳಕ್ಕೆ ಡಿವೈಎಸ್ಪಿ ರಾಮಕೃಷ್ಣ, ಸಿಪಿಐ ಎಂ.ಎಸ್.ಸರ್ದಾರ್, ಪಿಎಸೈ ನಾಗರಾಜು ಸ್ಥಳಕ್ಕೆ ಭೇಟಿ ನೀಡಿದ್ದು, ಮೃತ ವ್ಯಕ್ತಿಯ ಪತ್ನಿ ನಿಂಗಮ್ಮ ದೂರು ನೀಡಿದ್ದು ಕೊಡಿಗೇನಹಳ್ಳಿ ಠಾಣೆಯಲ್ಲಿ ೩ ಜನರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ.

Get real time updates directly on you device, subscribe now.

Comments are closed.

error: Content is protected !!