ಪರಮೇಶ್ವರ್ ರ ಸವ್ಯಸಾಚಿ ಗ್ರಂಥ ಬಿಡುಗಡೆ 10ಕ್ಕೆ

204

Get real time updates directly on you device, subscribe now.

ತುಮಕೂರು: ನಗರದ ಶ್ರೀಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ನೌಕರರ ಒಕ್ಕೂಟ ವತಿಯಿಂದ ಶ್ರೀಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಹಾಗೂ ಸಾಹೇ ವಿಶ್ವವಿದ್ಯಾನಿಲಯದ ಕುಲಾಧಿಪತಿ ಮಾಜಿ ಉಪಮುಖ್ಯಮಂತ್ರಿ ಮತ್ತು ಕೊರಟಗೆರೆ ವಿಧಾನ ಕ್ಷೇತ್ರದ ಶಾಸಕ ಡಾ.ಜಿ.ಪರಮೇಶ್ವರ ಅವರ ಕುರಿತ ಪ್ರೊ.ಮಾದೇವ್ ಭರಣಿ ಸಂಪಾದಿತ ಸವ್ಯಸಾಚಿ ಗೌರವ ಗ್ರಂಥ ಬಿಡುಗಡೆ ಮತ್ತುಅಭಿನಂದನಾ ಸಮಾರಂಭ ಏ.10 ರ ಭಾನುವಾರ ಸಿದ್ಧಾರ್ಥ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆಯಲಿದೆ ಎಂದು ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ನೌಕರರ ಒಕ್ಕೂಟದ ಅಧ್ಯಕ್ಷ ಡಾ.ಎಂ.ಜೆಡ್.ಕುರಿಯನ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮವನ್ನು ಇಂಡೋ ಶ್ರೀಲಂಕಾ ಇಂಟರ್ ನ್ಯಾಷನಲ್ ಬುದ್ದಿಸ್ಟ್ ಅಸೋಸಿಯೇಷನ್ ಅಧ್ಯಕ್ಷರಾದ ಡಾ.ಕೆ. ಸಿರಿ ಸುಮೇದಾಥೇರಾ ಉದ್ಘಾಟಿಸುವರು. ಪದ್ಮಶ್ರೀ ಡಾ.ಚಂದ್ರಶೇಖರ ಕಂಬಾರ ಅವರು ಸವ್ಯಸಾಚಿ ಗೌರವ ಗ್ರಂಥ ಬಿಡುಗಡೆ ಮಾಡಲಿದ್ದಾರೆ. ರಾಮಕೃಷ್ಣ ಆಶ್ರಮದ ವೀರೇಶಾನಂದ ಸರಸ್ವತಿ ಸ್ವಾಮಿ, ನಾಡೋಜ ಡಾ.ಬರಗೂರು ರಾಮಚಂದ್ರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮಾರುತಿ ಡಿ. ಮಾಲೆ ಭಾಗವಹಿಸುವರು.
ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ನೌಕರರ ಒಕ್ಕೂಟ ಆಯೋಜಿಸಿದ ಕಾರ್ಯಕ್ರಮದಲ್ಲಿ ನೌಕರರು ಮತ್ತು ಸಾರ್ವಜನಿಕರು ಭಾಗವಹಿಸಲು ಒಟ್ಟು 5 ಸಾವಿರ ಆಸನ ವ್ಯವಸ್ಥೆ ಮಾಡಲಾಗಿದೆ. ಎರಡು ರೀತಿಯ ವೇದಿಕೆಗಳಿಗೆ ಸಕಲ ಸಿದ್ಧತೆ ಬರದಿಂದ ಸಾಗುತ್ತಿದೆ, ಒಂದು ವೇದಿಕೆಯಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆದರೆ, ಇನ್ನೊಂದು ವೇದಿಕೆಯಲ್ಲಿ ಸಂಗೀತ ಕಾರ್ಯಕ್ರಮ ನಡೆಯಲಿದೆ, ಬಂದಂತಹ ಎಲ್ಲಾ ಅತಿಥಿಗಳಿಗೆ ಡಾ.ಎಚ್.ಎಂ.ಗಂಗಾಧರಯ್ಯ ಮೆಮೋರಿಯಲ್ ಹಾಲ್ನಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ನೌಕರರ ಒಕ್ಕೂಟದ ಉಪಾಧ್ಯಕ್ಷ ಡಾ.ಪ್ರಭಾಕರ್ ತಿಳಿಸಿದರು.
ಪ್ರೊ.ಮಾದೇವ್ ಭರಣಿ ಸಂಪಾದಿತ ಸವ್ಯಸಾಚಿ ಗೌರವ ಗ್ರಂಥದಲ್ಲಿ ಡಾ.ಜಿ.ಪರಮೇಶ್ವರ ಅವರನ್ನು ಹತ್ತಿರದಿಂದ ನೋಡಿದ ಸಾಮಾಜಿಕ ಹೋರಾಟಗಾರರು, ರಾಜ್ಯದ ಉದ್ದಗಲಕ್ಕು ಇರುವ ಪತ್ರಕರ್ತರು, ಅಧಿಕಾರಿಗಳು, ಶಾಸಕರು, ಸಂಸದರು, ಸಚಿವರು, ಕಲೆ, ಸಾಹಿತ್ಯ ಸೇರಿದಂತೆ ರಾಜಕೀಯವಾಗಿ, ಶೈಕ್ಷಣಿಕವಾಗಿ ಎಲ್ಲಾ ಆಯಾಮದಲ್ಲಿ ನೋಡಿದ ಹಲವಾರು ಗಣ್ಯರು ಜಾತ್ಯಾತೀತವಾಗಿ ಪಕ್ಷಾತೀತವಾಗಿ ಲೇಖನಗಳು ಗ್ರಂಥದಲ್ಲಿ ಒಳಗೊಂಡಿದೆ. ಗ್ರಂಥವು 1 ಕೆಜಿ 200 ಗ್ರಾಂ ತೂಕ ಹೊಂದಿದ್ದು, 476 ಪುಟಗಳಿದ್ದು, ನಾಲ್ಕು ಭಾಗಗಳಿವೆ ಎಂದು ಪ್ರೊ. ಮಾದೇವ್ ಭರಣಿ ತಿಳಿಸಿದರು.
ಶ್ರೀಸಿದ್ಧಾರ್ಥ ತಾಂತ್ರಿಕ ಮಹಾ ವಿದ್ಯಾಲಯದ ಪ್ರಾಂಶುಪಾಲ ಡಾ.ಎಂ.ಎಸ್.ರವಿಪ್ರಕಾಶ, ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಆಡಾಳಿತಾಧಿಕಾರಿ ನಂಜುಂಡಪ್ಪ, ಸಿದ್ಧಾರ್ಥ ಡೆಂಟಲ್ ಕಾಲೇಜಿನ ಪ್ರಾಂಶುಪಾಲ ಡಾ.ಪ್ರವೀಣ್ ಕುಡುವ, ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಎಸ್.ಕುಮಾರ್, ಸಾಹೇ ವಿಶ್ವವಿದ್ಯಾನಿಲಯ ಕುಲಾಧಿಪತಿ ಸಲಹೆಗಾರ ವಿವೇಕ್ ವೀರಯ್ಯ ಪತ್ರಿಕಾಗೋಷ್ಠಿಯಲ್ಲಿದ್ದರು.

Get real time updates directly on you device, subscribe now.

Comments are closed.

error: Content is protected !!