ಟಿಬಿಜೆಗೆ ಅಪಘಾತ- ಶೀಘ್ರ ಗುಣಮುಖರಾಗಲು ಪ್ರಾರ್ಥನೆ

241

Get real time updates directly on you device, subscribe now.

ಶಿರಾ: ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 48ರ ಸೀಬಿ ಕ್ರಾಸ್ ಬಳಿ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಜಯಚಂದ್ರ ಅವರಿಗೆ ಚಿಕ್ಕಪುಟ್ಟ ಪೆಟ್ಟಾಗಿದ್ದು, ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

ಟಿ.ಬಿ.ಜಯಚಂದ್ರ ಅವರು ಶಿರಾ ತಾಲ್ಲೂಕಿನ ವಿವಿಧ ದೇವಸ್ಥಾನಗಳ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ವೇಳೆ ಕಾರಿನ ಟೈರ್ ಸ್ಪೋಟಗೊಂಡು ಕಾರು ಪಲ್ಟಿಯಾಗಿದೆ, ಕಾರು ಚಾಲಕ ಹಾಗೂ ಗನ್ ಮ್ಯಾನ್ ಪಾರಾಗಿದ್ದಾರೆ. ಮಾಜಿ ಸಚಿವರಿಗೆ ಚಿಕ್ಕ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮನವಿ: ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು ಆಸ್ಪತ್ರೆಯಿಂದ ವೀಡಿಯೋ ಬಿಡುಗಡೆ ಮಾಡಿದ್ದು, ಜನರ ಆಶೀರ್ವಾದದಿಂದ ನನಗೆ ಯಾವುದೇ ದೊಡ್ಡಮಟ್ಟದ ಪೆಟ್ಟಾಗಿಲ್ಲ, ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಆತಂಕ ಪಡೆಬೇಡಿ ಹಾಗೂ ಯಾರೂ ಆಸ್ಪತ್ರೆಯ ಬಳಿ ಬರಬೇಡಿ, ನಮ್ಮಿಂದ ಬೇರೆಯವರಿಗೆ ತೊಂದರೆಯಾಗುವುದು ಬೇಡ ಎಂದು ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು ವೀಡಿಯೋ ಬಿಡುಗಡೆ ಮಾಡಿ ಮನವಿ ಮಾಡಿದ್ದಾರೆ.

ಶೀಘ್ರ ಗುಣಮುಖರಾಗುವಂತೆ ಪ್ರಾರ್ಥನೆ:

ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು ಶೀಘ್ರ ಗುಣಮುಖರಾಗಲೆಂದು ಶಿರಾ ತಾಲ್ಲೂಕಿನ ದೊಡ್ಡಬಾಣಗೆರೆ ಶ್ರೀಕರಿಯಮ್ಮ ದೇವಿ ದೇವಸ್ಥಾನದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ದಯಾನಂದ ಗೌಡ ಅವರು ವಿಶೇಷ ಪೂಜೆ ಸಲ್ಲಿಸಿ ಜಯಚಂದ್ರ ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು.
ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಅವರು ಮಾಜಿ ಸಚಿವರು, ಹಿರಿಯರು ಆದ ಟಿ.ಬಿ.ಜಯಚಂದ್ರ ಅವರ ಅಪಘಾತದ ಸುದ್ದಿ ಕೇಳಿ ಆಘಾತವಾಯಿತು, ಆದಷ್ಟು ಬೇಗ ಗುಣಮುಖರಾಗಲಿ ಎಂದು ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಹಾಗೂ ವಿಧಾನಪರಿಷತ್ ಸದಸ್ಯ ಚಿದಾನಂದ್ ಗೌಡ ಆಶಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!