ಅಪಘಾತದಲ್ಲಿ ಬೈಕ್ ಸವಾರ ಸಾವು

313

Get real time updates directly on you device, subscribe now.

ಕೊರಟಗೆರೆ: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತಾಲೂಕಿನ ಸಿ.ಎನ್.ದುರ್ಗಾ ಹೋಬಳಿಯ ಕೈಮರ, ತೋವಿನಕೆರೆ ಕ್ರಾಸ್ ಬಳಿ ಈ ದುರ್ಘನೆ ನಡೆದಿದೆ, ಚೆನ್ನಬಸವೇಶ್ವರ ಎನ್ನುವ ಖಾಸಗಿ ಬಸ್ ಚಾಲಕನ ಅಜಾಗರುಕತೆಯಿಂದ ಹಾಗೂ ಅತಿವೇಗದಿಂದ ತಿರುವಿನ ಬಳಿ ದ್ವಿಚಕ್ರ ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಶಿರಾ ತಾಲೂಕಿನ ದೊಡ್ಡಗೊಳ ಗ್ರಾಮದ ರವಿಕುಮಾರ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಸಿಪಿಐ ಸಿದ್ದರಾಮೇಶ್ವರ ಪಿಎಸ್ಐ ನಾಗರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!