ಪ್ರಜ್ಞೆ ತಪ್ಪಿದ ವ್ಯಕ್ತಿಗೆ ಎ.ಎಸ್.ಪಿ ಸಹಾಯ

172

Get real time updates directly on you device, subscribe now.


ತುಮಕೂರು: ನಗರದ ಬಿ.ಜಿ.ಎಸ್ ವೃತ್ತದ ಬಳಿ ಸೋಮವಾರ ಪ್ರಜ್ಞೆ ತಪ್ಪಿ ಬಿದ್ದ ವ್ಯಕ್ತಿಯೊಬ್ಬರನ್ನು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಟಿ.ಉದೇಶ್ ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಕಳುಹಿಸುವ ಮೂಲಕ ಮಾನವೀಯತೆ ಮೆರೆದರು.

ರಸ್ತೆ ದಾಟಲು ಬಂದ ವ್ಯಕ್ತಿ ಪ್ರಜ್ಞೆ ತಪ್ಪಿ ಬಿದ್ದಿದ್ದು, ಕೂಡಲೇ ಅಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂಚಾರ ಪೊಲೀಸರು ನೆರವಿಗೆ ಧಾವಿಸಿದರು. ಇದೇ ವೇಳೆ ಸ್ಥಳಕ್ಕೆ ಆಗಮಿಸಿದ ಉದೇಶ್ ನಿತ್ರಾಣ ಗೊಂಡ ವ್ಯಕ್ತಿಯನ್ನು ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ರವಾನೆ ಮಾಡಲು ಸಿಬ್ಬಂದಿಗೆ ಸೂಚಿಸಿದರು. ಅವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!