ಅಪಘಾತದಲ್ಲಿ ಯುವಕ ಸಾವು

389

Get real time updates directly on you device, subscribe now.

ಕೊರಟಗೆರೆ: ಕಾರು, ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾಗಿರುವ ಘಟನೆ ಕೋಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿಯ ಡಿ.ನಾಗೇನಹಳ್ಳಿ ಸಮೀಪ ಅನಂತಪುರ ಜಿಲ್ಲೆಯ ಕಂಬದೂರು ಗ್ರಾಮಕ್ಕೆ ಹೋಗುತ್ತಿದ್ದ ಲೇ.ದಾಸಣ್ಣನ ಮಗನಾದ ಅಶೋಕ್ ಕುಮಾರ್ (22) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದಾನೆ.
ಕೊರಟಗೆರೆ ಮಾರ್ಗವಾಗಿ ವೇಗವಾಗಿ ಬಂದ ಕಾರೊಂದು ಬೆಂಗಳೂರಿನಿಂದ ಬೈಕಿನಲ್ಲಿ ಹೋಗುತ್ತಿದ್ದ ಅಶೋಕ್ ಕುಮಾರ್ಗೆ ಗುದ್ದಿದ ಪರಿಣಾಮ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಈ ಸಂಬಂಧ ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಸಿಪಿಐ ಸಿದ್ದರಾಮೇಶ್ವರ್, ಪಿಎಸ್ಐ ಮಹಾಲಕ್ಷ್ಮಮ್ಮ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!