ಅಪಘಾತದಲ್ಲಿ ವ್ಯಕ್ತಿ ಸಾವು

233

Get real time updates directly on you device, subscribe now.

ಗುಬ್ಬಿ: ಪಟ್ಟಣದ ಹೊರ ವಲಯದ ಸಿಂಗೋನಹಳ್ಳಿ ರೈಲ್ವೆ ಮೇಲು ಸೇತುವೆ ಬಳಿ ಬುಧವಾರ ಬೆಳಗ್ಗೆ ಲಾರಿಗಳು ಡಿಕ್ಕಿ ಹೊಡೆದು ತಮಿಳುನಾಡು ಮೂಲದ ತಂಗರಸು ಪೆರುಮಾಳ್ (55) ಸ್ಥಳದಲ್ಲಿಯೇ ಮೃತನಾಗಿದ್ದು, ಶವವನ್ನು ಗುಬ್ಬಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಕೋಳಿ ತುಂಬಿದ್ದ ಲಾರಿ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಗುಬ್ಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!