ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ

206

Get real time updates directly on you device, subscribe now.

ತುಮಕೂರು: ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ, ಸರ್ಕಾರದಿಂದ 40 ಪರ್ಸೆಂಟ್ ಕಮಿಷನ್ ವಿಚಾರವಾಗಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧವೂ ತನಿಖೆಯಾಗಲಿ ಎಂದು ವಿಧಾನಪರಿಷತ್ ಸದಸ್ಯ ಆರ್.ರಾಜೇಂದ್ರ ಒತ್ತಾಯಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಇದುವರೆಗೂ ಕಂಡು ಕೇಳದಂಥ ಭ್ರಷ್ಟಾಚಾರ ತಾಂಡವವಾಡುತ್ತಿದ್ದು ಇತ್ತೀಚೆಗೆ ಕಂಟ್ರಾಕ್ಟರ್ ಒಬ್ಬರು ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ರಾಜ್ಯದಲ್ಲಿ ಭ್ರಷ್ಟಾಚಾರ ಯಾವ ಮಟ್ಟಿಗೆ ನಡೆಯುತ್ತಿದೆ ಎನ್ನುವುದರ ಬಗ್ಗೆ ರಾಜ್ಯದ ಜನತೆಗೆ ಗೊತ್ತಾಗಿದೆ ಎಂದರು.
ಈ ಹಿಂದೆ ಈಶ್ವರಪ್ಪ ಅವರು ಪ್ರಧಾನಮಂತ್ರಿ ಹಾಗೂ ರಾಜ್ಯಪಾಲರಿಗೆ ಪತ್ರ ಬರೆದಿದ್ದರು, ತನ್ನ ಇಲಾಖೆಯಲ್ಲಿ ಸಿಎಂ ಯಡಿಯೂರಪ್ಪ ಅವರ ಹಸ್ತಕ್ಷೇಪ ಆಗ್ತಿದೆ ಎಂದು ಪತ್ರ ಬರೆದಿದ್ದರು, 1,200 ಕೋಟಿ ರೂಪಾಯಿಯ ಕಾಮಗಾರಿಯನ್ನ ತಮ್ಮ ಗಮನಕ್ಕೆ ಬಾರದೇ ಟೆಂಡರ್ ನೀಡಿದ್ದಾರೆ ಎಂದು ಪತ್ರ ಬರೆದಿದ್ದರು, ಒಬ್ಬರು ಸಚಿವರೇ ಸಿಎಂ ವಿರುದ್ಧ ಆರೋಪ ಮಾಡಿದಾಗ ಅವರ ವಿರುದ್ಧ ತನಿಖೆ ನಡೆಯಬೇಕಲ್ಲವೇ ಎಂದರು.
ಮಂಗಳೂರು ಹಿಜಾಬ್ ಪ್ರಕರಣದ ಕುರಿತು ಮಾತನಾಡಿ, ವಿದ್ಯಾರ್ಥಿಗಳು ಹೈಕೋರ್ಟ್ ತೀರ್ಪಿಗೆ ತಲೆಬಾಗಬೇಕು, ಕೋರ್ಟ್ ಆದೇಶದಂತೆ ನಡೆದುಕೊಳ್ಳಬೇಕು, ವಿದ್ಯಾರ್ಥಿಗಳು ಕೋರ್ಟ್ ಆದೇಶವನ್ನ ಪಾಲನೆ ಮಾಡಬೇಕು ಎಂದರು.
ಸುದ್ದಿಗೋಷ್ಠಿಯಲ್ಲಿ ಶಶಿ ಹುಲಿಕುಂಟೆಮಠ್, ಕಲ್ಲಳ್ಳಿ ದೇವರಾಜು ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!