ತುಮಕೂರು: ತುಮಕೂರು ಜಿಲ್ಲಾ ಬ್ರಾಹ್ಮಣ ಮಹಾಸಭಾದ ನಿರ್ದೇಶಕ, ಗಾಯತ್ರಿ ಸಹಕಾರ ಸಂಘದ ನಿರ್ದೇಶಕ ಹಾಗೂ ಬ್ರಾಹ್ಮಣ ವಿದ್ಯಾರ್ಥಿ ನಿಲಯದ ಉಪಾಧ್ಯಕ್ಷರಾದ ಸಿ.ಫಣೀಶ್ ಅವರ ತಂದೆ, ನಿವೃತ್ತ ಶಿಕ್ಷಕ ಚಂದ್ರಶೇಖರ್ (90) ಜೂ.3 ರಂದು ಬೆಳಗಿನ ಜಾವ ನಗರದ ಆಚಾರ್ಯರ ಬೀದಿಯಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು.
ದಿವಂಗತರು ಪತ್ನಿ ಪಾರ್ವತಮ್ಮ (ಇವರು ಭುವನೇಶ್ವರಿ ಸಹಕಾರ ಸಂಘದ ಮಾಜಿ ಅಧ್ಯಕ್ಷರು ಹಾಗೂ ಶಂಕರ ಸೇವಾ ಸಮಿತಿ ಮಾಜಿ ನಿರ್ದೇಶಕರು), ಫಣೀಶ್ ಸೇರಿದಂತೆ ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ನಗರದ ಶಾಸಕ ಜಿ.ಬಿ.ಜ್ಯೋತಿಗಣೇಶ್, ಮಾಜಿ ಸಚಿವ ಸೊಗಡು ಶಿವಣ್ಣ, ಗಾಯತ್ರಿ ಸಹಕಾರ ಸಂಘದ ಅಧ್ಯಕ್ಷ ಕೆ.ವಿ.ಕುಮಾರ್, ಜಿಲ್ಲಾ ಬ್ರಾಹ್ಮಣ ಸಭಾ ಅಧ್ಯಕ್ಷ ಹೆಚ್.ಎನ್.ಚಂದ್ರಶೇಖರ್, ಮಾಜಿ ನಗರಸಭಾ ಸದಸ್ಯ ಹೆಚ್.ಕೆ.ನಾಗರಾಜು ಸೇರಿದಂತೆ ನಗರದ ಹಲವು ಗಣ್ಯರು ಮೃತರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದರು.
ನಿವೃತ್ತ ಶಿಕ್ಷಕ ಚಂದ್ರಶೇಖರ್ ನಿಧನ
Get real time updates directly on you device, subscribe now.
Prev Post
Next Post
Comments are closed.