ತುಮಕೂರು: ಇಲ್ಲಿನ ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಶಂಭುಕುಮಾರ್ ಅವರನ್ನು ಅಮಾನತ್ತು ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಹಾಯಕ ಇಂಜಿನಿಯರ್ ಮೇಲೆ ದೌರ್ಜನ್ಯ ಕಾಯ್ದೆ ಮತ್ತು ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷನ ಕೊಲೆ ಯತ್ನ ವಿಚಾರವಾಗಿ ದೂರು ದಾಖಲಾಗಿತ್ತು. ಆರೋಪಿ ಶಂಭುಕುಮಾರ್ ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ.
ಆರೋಪಿ ಇಂಜಿನಿಯರ್ ಶಂಭುಕುಮಾರ್ ನ ಪತ್ತೆಗೆ ವಿಶೇಷ ತಂಡ ರಚಿಸಿ ಬಂಧಿಸುವಲ್ಲಿ ಪೊಲೀಸ್ ಇಲಾಖೆ ವಿಲವಾಗಿತ್ತು. ಪ್ರಭಾವಿ ರಾಜಕಾರಣಿಗಳ ಕೃಪೆಯಿಂದ ನಿರೀಕ್ಷಣಾ ಜಾಮೀನು ಪಡೆದು ಕರ್ತವ್ಯಕ್ಕೆ ಹಾಜರಾಗಿದ್ದರು ಎನ್ನಲಾಗಿದೆ. ಕರ್ತವ್ಯಕ್ಕೆ ಹಾಜರಾದ ವಾರದಲ್ಲೇ ಅಮಾನತ್ತುಗೊಳಿಸಿದ್ದಾರೆ ಎಂದು ತಡವಾಗಿ ಬೆಳಕಿಗೆ ಬಂದಿದೆ.
ಇಂಜಿನಿಯರ್ ಶಂಭುಕುಮಾರ್ ಸಸ್ಪೆಂಡ್!
Get real time updates directly on you device, subscribe now.
Prev Post
Comments are closed.