ತುರುವೇಕೆರೆಗೆ ಪ್ರಜ್ವಲ್ ರೇವಣ್ಣ

154

Get real time updates directly on you device, subscribe now.


ತುರುವೇಕೆರೆ: ತಾಲೂಕಿನ ಗೋಣಿ ತುಮಕೂರಿನಲ್ಲಿ ವಿನಾಯಕ ಬಳಗದ ವತಿಯಿಂದ ನ. 25 ರ ಶುಕ್ರವಾರ ಹಮ್ಮಿಕೊಳ್ಳಲಾಗಿರುವ ಗಣಪತಿ ವಿಸರ್ಜನಾ ಮಹೋತ್ಸವಕ್ಕೆ ಹಾಸನ ಜಿಲ್ಲಾ ಸಂಸದ ಪ್ರಜ್ವಲ್ ರೇವಣ್ಣ ಆಗಮಿಸಲಿದ್ದಾರೆ ಎಂದು ಕಾರ್ಯಕ್ರಮದ ಆಯೋಜಕ, ಗ್ರಾಪಂ ಸದಸ್ಯ ನಾಗೇಂದ್ರ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು ಸಂಸದ ಪ್ರಜ್ವಲ್ ರೇವಣ್ಣ ಅವರು 25 ರ ಸಂಜೆ ಗೋಣಿ ತುಮಕೂರಿನ ಗಣೇಶ ವಿಸರ್ಜನಾ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಜನತೆಯನ್ನುದ್ದೇಶಿಸಿ ಪ್ರಜ್ವಲ್ ರೇವಣ್ಣ ಮಾತನಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಶಾಸಕ ಎಂ.ಟಿ. ಕೃಷ್ಣಪ್ಪ ವಹಿಸಲಿದ್ದಾರೆ. ಜೆಡಿಎಸ್ ಅಧ್ಯಕ್ಷ ಸ್ವಾಮಿ, ಮುಖಂಡರಾದ ರಾಜೇಶ್, ಎಂ.ಡಿ. ರಮೇಶ್ಗೌಡ, ಲಕ್ಷ್ಮೀಕಾಂತ್, ಚಂದ್ರೇಶ್, ಬಾಣಸಂದ್ರ ರಮೇಶ್, ವಿಜಯೇಂದ್ರ, ತ್ಯಾಗರಾಜ್ ಹಾಜರಿರಲಿದ್ದಾರೆ. ಆಸುಪಾಸಿನ ಗ್ರಾಮಗಳ ಜೆಡಿಎಸ್ ಕಾರ್ಯಕರ್ತರು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ನಾಗೇಂದ್ರ ಮನವಿ ಮಾಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!