ಬಸ್ನಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು

288

Get real time updates directly on you device, subscribe now.


ಕುಣಿಗಲ್: ಪಟ್ಟಣದ ಮೂಲಕ ಕೊಣನೂರಿಗೆ ಬೆಂಗಳೂರಿನಿಂದ ಹೋಗುತ್ತಿದ್ದ ಅರಕಲಗೂಡು ಡಿಪೋಗೆ ಸೇರಿದ ಸಾರಿಗೆ ಸಂಸ್ಥೆಯ ಬಸ್ನಲ್ಲಿ ಪ್ರಯಾಣಿಕನೋರ್ವ ಅಸ್ವಸ್ಥಗೊಂಡಿದ್ದು ಆತನನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಮೃತನನ್ನು ನಾಗಮಂಗಲ ತಾಲ್ಲೂಕಿನ ಚಿಟ್ಟನಹಳ್ಳಿಯ ಶಂಕರ (52) ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನ ಕಾಮಾಕ್ಷಿಪಾಳ್ಯದ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದು, ಸ್ವಗ್ರಾಮಕ್ಕೆ ಹಿಂದಿರುಗಲು ಶುಕ್ರವಾರ ಕೊಣನೂರಿಗೆ ಹೋಗುವ ಸಾರಿಗೆ ಸಂಸ್ಥೆ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು. ಬಸ್ ಸೋಲೂರಿನ ಸಮೀಪ ಬಂದಾಗ ಅಸ್ವಸ್ಥಗೊಂಡಿದ್ದು, ಇತರೆ ಪ್ರಯಾಣಿಕರು ತಿಳಿಸಿದ ಹಿನ್ನೆಲೆಯಲ್ಲಿ ಚಾಲಕ ಲೋಕೇಶ್ ಬಸ್ಸನ್ನು ನೇರವಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಬಳಿ ತಂದು ಅಸ್ವಸ್ಥ ಶಂಕರನನ್ನು ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತನ ಪತ್ನಿ ಭಾರತಿ ಕುಣಿಗಲ್ ಪೊಲೀಸರಿಗೆ ದೂರು ನೀಡಿದ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!