ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸಿ: ಸಿಇಒ

224

Get real time updates directly on you device, subscribe now.


ತುಮಕೂರು: ಪ್ರಸ್ತುತ ದಿನಗಳಲ್ಲಿ ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲರ ಪ್ರೋತ್ಸಾಹ ಮತ್ತು ಸಹಕಾರ ಅಗತ್ಯವಾಗಿದೆ ಎಂದು ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲೆಯ ಎಲ್ಲಾ ಕ್ರೀಡಾ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ದ ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಗ್ರಾಮೀಣ ಕ್ರೀಡೆಗಳಾದ ಕಬಡ್ಡಿ, ಖೋಖೋ, ಕುಸ್ತಿಯಂತ ಕ್ರೀಡೆಗಳಿಗೆ ಉತ್ತೇಜನ ನೀಡಬೇಕಾಗಿದೆ. ಹಾಗೆಯೇ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಕ್ರೀಡಾ ಸ್ಫೂರ್ತಿಯಿಂದ ತೊಡಗಿಕೊಳ್ಳಬೇಕು ಎಂದರು.
ಕ್ರೀಡಾಕೂಟದಲ್ಲಿ ಕ್ರೀಡಾ ಮನೋಭಾವದಿಂದ ಪಾಲ್ಗೊಂಡಾಗ ಮಾತ್ರ ಕ್ರೀಡೆಯ ನೈಜತೆ ಕಾಪಾಡಲು ಸಾಧ್ಯವಾಗುತ್ತದೆ. ಈ ಗ್ರಾಮೀಣ ಕ್ರೀಡಾಕೂಟದಲ್ಲಿ ಖೋಖೋ ಪುರುಷ, ಮಹಿಳೆ ಪಂದ್ಯಾವಳಿ, ಕಬಡ್ಡಿ ಪುರುಷ, ಮಹಿಳೆ ಪಂದ್ಯಾವಳಿ ಆಯೋಜಿಸಲಾಗಿದ್ದು, ಜಿಲ್ಲೆಯ 10 ತಾಲ್ಲೂಕುಗಳಿಂದ 40 ತಂಡ ಭಾಗವಹಿಸಿ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ನೀಡಿದ್ದಾರೆ ಎಂದರು.
ಗ್ರಾಮೀಣ ಕ್ರೀಡಾಕೂಟ ಯಶಸ್ವಿಗೆ ಸಹಕರಿಸಿದ ಜಿಲ್ಲಾಧಿಕಾರಿ, ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿ, ಜಿಲ್ಲಾ ಪಂಚಾಯತ್ ಅಧಿಕಾರಿಗಳು ಸೇರಿದಂತೆ ಎಲ್ಲರಿಗೂ ಧನ್ಯವಾದ ಸಲ್ಲಿಸುವುದಾಗಿ ಹೇಳಿದರು.
ಪುರುಷರ ಕಬಡ್ಡಿಯಲ್ಲಿ ಕುಣಿಗಲ್ ಪ್ರಥಮ, ತಿಪಟೂರು ದ್ಪಿತೀಯ, ಪಾವಗಡ ಮತ್ತು ಮಧುಗಿರಿ ತೃತೀಯ ಸ್ಥಾನ ಪಡೆದುಕೊಂಡಿದ್ದರೆ. ಮಹಿಳೆಯ ಕಬಡ್ಡಿ ಪಂದ್ಯಾವಳಿಯಲ್ಲಿ ಕುಣಿಗಲ್ ತಂಡ ಪ್ರಥಮ, ಗುಬ್ಬಿ ದ್ವಿತೀಯ, ಕೊರಟಗೆರೆ ಮತ್ತು ತಿಪಟೂರು ತಂಡ ತೃತೀಯ ಸ್ಥಾನ ಪಡೆದು ವಿಜೇತವಾಗಿವೆ.
ಪುರುಷರ ಖೋಖೋ ಪಂದ್ಯಾವಳಿಯಲ್ಲಿ ಪಾವಗಡ ತಂಡ ಪ್ರಥಮ, ತುಮಕೂರು ದ್ವಿತೀಯ, ಗುಬ್ಬಿ ಮತ್ತು ಕುಣಿಗಲ್ ತಂಡ ತೃತೀಯ ಸ್ಥಾನ ಹಾಗೂ ಮಹಿಳೆಯರ ಖೋಖೋ ಪಂದ್ಯಾವಳಿಯಲ್ಲಿ ಕುಣಿಗಲ್ ಪ್ರಥಮ, ಗುಬ್ಬಿ ದ್ವಿತೀಯ ಹಾಗೂ ತುಮಕೂರು, ಕೊರಟಗೆರೆ ತೃತೀಯ ಸ್ಥಾನ ಪಡೆದುಕೊಂಡಿವೆ.
ಇದೇ ಸಂದರ್ಭದಲ್ಲಿ ಕ್ರೀಡಾಕೂಟದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕ ಜ್ಯೋತಿಗಣೇಶ್, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್, ಜಿಪಂ ಮುಖ್ಯ ಯೋಜನಾಧಿಕಾರಿ ಸಣ್ಣಮಸಿಯಪ್ಪ, ಮುಖ್ಯ ಲೆಕ್ಕಾಧಿಕಾರಿ ನರಸಿಂಹಮೂರ್ತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಕೆ.ನಾಗರಾಜು, ವಾಲಿಬಾಲ್ ತರಬೇತುದಾರ ಪ್ರದೀಪ್, ಇಸ್ಮಾಯಲ್ ಹಾಗೂ ಎಲ್ಲಾ ತಾಲ್ಲೂಕಿನ ಇಓಗಳು ಇದ್ದರು.

Get real time updates directly on you device, subscribe now.

Comments are closed.

error: Content is protected !!