ಗುಜರಾತ್ನಲ್ಲಿ ಬಿಜೆಪಿ ಗೆಲುವು- ಕಾರ್ಯಕರ್ತರ ವಿಜಯೋತ್ಸವ

107

Get real time updates directly on you device, subscribe now.


ತುಮಕೂರು: ಗುಜರಾತ್ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ನಗರದ ಟೌನ್ಹಾಲ್ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಈ ವೇಳೆ ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ ಮಾತನಾಡಿ, ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದಲ್ಲಿ ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಅತ್ಯಂತ ಅಧಿಕ ಸ್ಥಾನಗಳಲ್ಲಿ ಜಯಗಳಿಸಿದ್ದಾರೆ. ಗುಜರಾತ್ ಜನತೆ ಬಿಜೆಪಿ ಪಕ್ಷದ ಆಡಳಿತದ ಮೇಲೆ ನಂಬಿಕೆ ಇಟ್ಟು ಮತ ಕೊಟ್ಟು ಮತ್ತೊಮ್ಮೆ ಅಧಿಕಾರ ನೀಡಿದ್ದಕ್ಕಾಗಿ ಗುಜರಾತ್ನ ಎಲ್ಲಾ ಜನತೆಗೆ ತುಮಕೂರು ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಅಂಬಿಕ ಹುಲಿನಾಯ್ಕರ್ ಮಾತನಾಡಿ, ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಅಧಿಕ ಸ್ಥಾನಗಳಲ್ಲಿ ಬಿಜೆಪಿ ಗೆದ್ದು ಅಧಿಕಾರದಲ್ಲಿ ಮುಂದುವರೆಯುವಂತೆ ಮಾಡಿರುವುದಕ್ಕೆ ಗುಜರಾತ್ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ. ಗುಜರಾತನಲ್ಲಿ ಈ ಬಾರಿ ಅತಿ ಹೆಚ್ಚು ಮಹಿಳೆಯರು ಗೆಲುವು ಸಾಧಿಸಿದ್ದಾರೆ. ಇದು ಬಿಜೆಪಿಯಲ್ಲಿ ಮಹಿಳೆಯರಿಗೆ ಸಂದಿರುವ ಗೌರವ, ಇದಕ್ಕಾಗಿ ಪ್ರಧಾನಿ ನರೇಂದ್ರಮೋದಿ ಹಾಗೂ ಅಮಿತ್ ಷಾ ಹಾಗೂ ಎಲ್ಲಾ ಮುಖಂಡರಿಗೆ ಮಹಿಳೆಯರ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ಈ ವೇಳೆ ಟೂಡಾ ಮಾಜಿ ಅಧ್ಯಕ್ಷ ಬಿ.ಎಸ್.ನಾಗಣ್ಣ, ಹಿರಿಯ ಮುಖಂಡರಾದ ರುದ್ರೇಶ್, ವೇದಮೂರ್ತಿ, ಬನಶಂಕರಿ ಬಾಬು, ವಿರೂಪಾಕ್ಷಪ್ಪ, ಪಾಲಿಕೆ ಸದಸ್ಯ ಮಲ್ಲಿಕಾರ್ಜುನಯ್ಯ, ಗೋಪಿ, ಶಬ್ಬಿರ್, ವಿಶ್ವನಾಥ್, ರಾಮಚಂದ್ರರಾವ್, ಚನ್ನಬಸಪ್ಪ, ವಿಶಾಲಕ್ಷಮ್ಮ, ನಾಗೇಂದ್ರ, ಕಾವ್ಯ, ಸೌಭಾಗ್ಯಮ್ಮ, ಅಕ್ಷಯ ಚೌದರಿ, ಪ್ರತಾಪ್ ಮಲ್ಲಣ್ಣ, ಪ್ರವೀಣ್ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!