ಕರೆಂಟ್ ಶಾಕ್ ಗೆ ಚಿರತೆ ಬಲಿ

164

Get real time updates directly on you device, subscribe now.


ಗುಬ್ಬಿ: ತಾಲೂಕಿನ ಕಡಬ ಹೋಬಳಿಯ ಕರೆಗೌಡನಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ವಿದ್ಯುತ್ ಶಾಕ್ಗೆ ಬಲಿಯಾಗಿರುವ ಘಟನೆ ನಡೆಡಿದೆ.

ಮಂಗಳವಾರ ತೋಟಕ್ಕೆ ಹೋಗಿದ್ದ ರೈತರು ಟ್ರಾನ್ಸ್ ಫಾರಂ ಲೈನ್ ಕಂಬದಲ್ಲಿ ಸಿಲುಕಿರುವ ಚಿರತೆ ನೋಡಿ ಬೆಸ್ಕಾಂ ಇಲಾಖೆ ಹಾಗೂ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಆಗಮಿಸಿರುವ ಬೆಸ್ಕಾಂ ಹಾಗೂ ಅರಣ್ಯ ಇಲಾಖೆ ವಲಯ ಅರಣ್ಯ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಚಿರತೆಯನ್ನು ವಿದ್ಯುತ್ ಕಂಬದಿಂದ ಕೆಳಗಿಳಿಸಿ ಮರಣೋತ್ತರ ಪರೀಕ್ಷೆಯನ್ನು ಪಶುವೈದ್ಯಾಧಿಕಾರಿಗಳ ಸಮ್ಮುಖದಲ್ಲಿ ನಡೆಸಿ ಸುಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ವಲಯ ಅರಣ್ಯಾಧಿಕಾರಿ ದುಗ್ಗಪ್ಪ ಇದು ಹೆಣ್ಣು ಚಿರತೆಯಾಗಿದ್ದು ಸುಮಾರು 2 ರಿಂದ 3 ವರ್ಷ ಪ್ರಾಯದ್ದಾಗಿದೆ. ಸೋಮವಾರ ರಾತ್ರಿ ಮರದಿಂದ ಇನ್ನೊಂದು ಮರಕ್ಕೆ ನೆಗೆಯುವಂತಹ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಕಂಬಕ್ಕೆ ಬಿದ್ದು ವಿದ್ಯುತ್ ಶಾಕ್ ನಿಂದ ಮರಣ ಹೊಂದಿರಬಹುದು ಎಂದು ತಿಳಿಸಿದರು.

Get real time updates directly on you device, subscribe now.

Comments are closed.

error: Content is protected !!