ನಗರದಲ್ಲಿ ಬೂತ್ ವಿಜಯ್ ಅಭಿಯಾನ

ಬಿಜೆಪಿ ಪಕ್ಷ ಸದೃಢಗೊಳಿಸಲು ಸಂಕಲ್ಪ: ಬಿಕೆಎಂ

170

Get real time updates directly on you device, subscribe now.


ಶಿರಾ: ಬಿಜೆಪಿ ಪಕ್ಷವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ದೇಶಾದ್ಯಂತ ಜನವರಿ 2 ರಿಂದ 12ರವರೆಗೆ ಹಮ್ಮಿಕೊಂಡಿದ್ದ ಬೂತ್ ವಿಜಯ ಅಭಿಯಾನವು ಅತ್ಯಂತ ಯಶಸ್ವಿಯಾಗಿ ಮುಕ್ತಾಯವಾಗಿದೆ. ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿದೆ ಎಂದು ಮಧುಗಿರಿ ವಿಭಾಗದ ಬಿಜೆಪಿ ಅಧ್ಯಕ್ಷ ಬಿ.ಕೆ.ಮಂಜುನಾಥ್ ಹೇಳಿದರು.

ಅವರು ನಗರದ ಸಂತೇಪೇಟೆಯಲ್ಲಿ ಹಮ್ಮಿಕೊಂಡಿದ್ದ ಬೂತ್ ವಿಜಯ್ ಅಭಿಯಾನ ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರ ಮನೆಯ ಮೇಲೆ ಬಿಜೆಪಿ ಬಾವುಟ ಹಾರಿಸಿ ಮಾತನಾಡಿದರು. ಬೂತ್ ವಿಜಯ್ ಅಭಿಯಾನ ಮುಖ್ಯ ಉದ್ದೇಶ ಶೇ.100ರಷ್ಟು ಮತದಾನ ಆಗುವ ರೀತಿಯಲ್ಲಿ ಮತದಾರರನ್ನು ಮನವೊಲಿಸುವುದು ಮತ್ತು ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರಗಳ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಿಳಿಸುವುದಾಗಿದೆ. ಹಾಗೂ ಪ್ರಧಾನಮಂತ್ರಿಯವರ ಮನ್ ಕೀ ಬಾತ್ ಕಾರ್ಯಕ್ರಮವನ್ನು ಎಲ್ಲಾ ಬೂತ್ಗಳಲ್ಲಿ ಹಾಗೂ ಹಳ್ಳಿಗಳಲ್ಲಿ ವೀಕ್ಷಿಸುವಂತೆ ಜನರನ್ನು ಪ್ರೇರೇಪಿಸುವುದಾಗಿದೆ. ಇದಕ್ಕಾಗಿ ಪ್ರತೀ ಬೂತ್ನಲ್ಲಿ ವಾಟ್ಸ್ಪ್ ಗ್ರೂಪ್ಗಳನ್ನು ಮಾಡಿ ಪಕ್ಷದ ಎಲ್ಲಾ ವಿಚಾರಗಳನ್ನು ಜನರಿಗೆ ಮುಟ್ಟಿಸಲಾಗುತ್ತಿದೆ. ಬೂತ್ ವಿಜಯ ಅಭಿಯಾನದ ಯಶಸ್ವಿಗಾಗಿ ಶ್ರಮಿಸಿದ ಎಲ್ಲಾ ಬಿಜೆಪಿ ಕಾರ್ಯಕರ್ತರಿಗೂ ಧನ್ಯವಾದ ತಿಳಿಸುತ್ತೇನೆ ಎಂದ ಅವರು ಮುಂದಿನ ವಿಧಾನಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ಪ್ರಚಾರ ಆರಂಭಿಸಿದೆ ಎಂದರು.

ವಿಧಾನಸಭೆ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ ಅವರು ಭಾಗವಹಿಸಿ ಮಾತನಾಡಿ ಬಿಜೆಪಿ ಪಕ್ಷದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸುವ ಕಾರ್ಯಕ್ರಮವಾದ ಬೂತ್ ವಿಜಯ್ ಅಭಿಯಾನ ಅತ್ಯಂತ ಯಶಸ್ವಿಯಾಗಿ ಮುಕ್ತಾಯವಾಗಿದೆ ಎಂದರು.

ಈ ಸಂರ್ಭದಲ್ಲಿ ಶಿರಾ ಯೋಜನಾ ಪ್ರಾಧಿಕಾರದ ಸದಸ್ಯ ಕೃಷ್ಣಮೂರ್ತಿ, ನರಸಿಂಹರಾಜು, ಮಹಿಳಾ ಘಟಕದ ನಾಗರತ್ನಮ್ಮ, ಮದಿಗೆರೆ ಕರಿಯಣ್ಣ ಸೇರಿದಂತೆ ಹಲವರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!